News Karnataka Kannada
Wednesday, May 08 2024
ಬೆಂಗಳೂರು ನಗರ

ಹಿಜಾಬ್ ವಿವಾದ: ತೀರ್ಪು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಸಚಿವ ಅರಗ ಜ್ಞಾನೇಂದ್ರ

Hampi: There is no proposal before the government to hand over chandrasekhar's death case to CID
Photo Credit :

ಬೆಂಗಳೂರು : ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬಳಿಕವೂ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ತೀರ್ಪು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಹಿಜಾಬ್ ಇಸ್ಲಾಂ ನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ, ಶಾಲಾ-ಕಾಲೇಜುಗಳಲ್ಲಿ ಸರ್ಕಾರದ ಸಮವಸ್ತ್ರ ಆದೇಶ ಕಾನೂನು ಬದ್ಧ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿದ್ದು, ತೀರ್ಪಿನ ವಿರುದ್ಧ ಮುಸ್ಲಿಂ ಸಂಘಟನೆಗಳು ರಾಜ್ಯದಲ್ಲಿ ಬಂದ್ ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ತೀರ್ಪು ಪ್ರಕಟವಾದ ಬಳಿಕವೂ ಪ್ರತಿಭಟಿಸುತ್ತಿರುವುದು ಸರಿಯಲ್ಲ ಎಂದರು.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸುಪ್ರೀಂ ಗೆ ಹೋಗಿರುವುದರಲ್ಲಿ ಸಮಸ್ಯೆಯಿಲ್ಲ, ಆದರೆ ಪ್ರತಿಭಟನೆ, ಮತ್ತೆ ವಿವಾದಗಳನ್ನು ಸೃಷ್ಟಿಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಡುವಂತೆ ಮಾಡಬಾರದು. ಮಕ್ಕಳಲ್ಲಿ ಮತಾಂಧತೆಯ ಬೀಜ ಬಿತ್ತಬಾರದು. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು