ಬೆಂಗಳೂರು : ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಹಿಜಾಬ್ ಧರಿಸಲು ಅವಕಾಶ ಕೋರಿದ್ದ ಅರ್ಜಿಗಳ ವಜಾ ಮಾಡಿದೆ.
ಈ ಬಗ್ಗೆ ಕಾಂಗ್ರೆಸ್ ನಾಯಕ ಯು.ಟಿ.ಖಾದರ್ ಮಾತನಾಡಿದ್ದು, ಹೈಕೋರ್ಟ್ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪನ್ನು ಉಲ್ಲಂಘಿಸಲು ಆಗಲ್ಲ. ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೆ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗಬಾರದು. ಶಾಲೆಯ ಒಳಗೆ ಧರಿಸುವುದಕ್ಕೆ ಅವಕಾಶವಿಲ್ಲ. ಶಾಲೆಯ ಆವರಣದವರೆಗೆ ಧರಿಸಬಹುದು. ಶಾಲೆಗಳ ಸಿಡಿಸಿಗೆ ಅವಕಾಶ ಕೊಟ್ಟಿದೆ. ನ್ಯಾಯಾಲಯದ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕು. ಮಕ್ಕಳು ಶಿಕ್ಷಣದ ಕಡೆ ಗಮನಹರಿಸಲಿ ಎಂದಿದ್ದಾರೆ.