News Karnataka Kannada
Monday, April 29 2024
ಬೆಂಗಳೂರು ನಗರ

ಹಿಜಾಬ್ ಹೆಸರಲ್ಲಿ ಧರ್ಮಾಂಧತೆಯನ್ನು ನಾವು ವಿರೋಧಿಸುತ್ತೇವೆ; ಕೋಟ ಶ್ರೀನಿವಾಸ್ ಪೂಜಾರಿ

No one should be happy that opposition leader has not been elected: Kota Srinivas Poojary
Photo Credit :

ಬೆಂಗಳೂರು : ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಅನಗತ್ಯ ಗೊಂದಲಗಳು ಬೇಡ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಒಂದೂವರೆ ವರ್ಷದ ಹಿಂದೆ ಯಾವ ಸಮಸ್ಯೆಗಳೂ ಇರಲಿಲ್ಲ. ಹಿಜಾಬ್ ಹೆಸರಲ್ಲಿ ಧರ್ಮಾಂಧತೆಯನ್ನು ನಾವು ವಿರೋಧಿಸುತ್ತೇವೆ. ಹೊರಗಿನ ಮತಾಂಧ ಶಕ್ತಿಗಳು ಇದನ್ನು ಮಾಡುತ್ತಿವೆ ಎಂದು ಹೇಳಿದರು.

ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬಂತಾಗಿ ಕೇಸರಿ ಶಾಲು ಧರಿಸಿದ್ದಾರೆ. ಒಂದು ತಪ್ಪಾದರೆ ಇನ್ನೊಂದೂ ತಪ್ಪಲ್ಲವೇ ? ಏನೇ ಆಗಲಿ ಶಿಕ್ಷಣ ಸಂಸ್ಥೆಗಳಲ್ಲಿ ಗೊಂದಲ ಇರಬಾರದು. ಶಾಲಾ ಸಮವಸ್ತ್ರಕ್ಕೆ ವಿದ್ಯಾರ್ಥಿಗಳು ಬದ್ಧರಾಗಿರಬೇಕು. ಹಿಜಾಬ್, ಕೇಸರಿ ಶಾಲು ಎಂಬ ಚರ್ಚೆ ಬೇಡ ಎಂದು ತಿಳಿಸಿದರು.

ಇದೇ ವೇಳೆ ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರವಾಗಿ ಮಾತನಾಡಿದ ಶ್ರೀನಿವಾಸ್ ಪೂಜಾರಿ, ಇಂಥ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಪರಿಸ್ಥಿತಿ ತಿಳಿಗೊಳಿಸುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಸರ್ಕಾರವನ್ನು ಚುಚ್ಚುವ ಕೆಲಸ ಮಾಡುತ್ತಿದ್ದಾರೆ. ವೋಟ್ ಗಾಗಿ ರಾಜಕೀಯ ಹೇಳಿಕೆ ಕೊಡುತ್ತಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು