News Karnataka Kannada
Monday, April 29 2024
ಬೆಂಗಳೂರು ನಗರ

ಹುಬ್ಬಳ್ಳಿ ಹಿಂಸಾಚಾರದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದ್ದರೆ ಬಂಧಿಸಲಿ; ಡಿಕೆಶಿ

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ, ರದ್ದು ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
Photo Credit :

ಬೆಂಗಳೂರು : ಕಳೆದ ವಾರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರು, ಕೇಂದ್ರ ಸಚಿವರು, ಸಂಸದರು ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಅದು ನಿಜವೇ ಆಗಿದ್ದರೆ, ಅವರನ್ನು ಬಂಧಿಸಲಿ. ಏಕೆ ಬಂಧಿಸುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರ ಸಹಾಯ ಕೋರಿದ್ದಾರೆ. ಪೊಲೀಸರೇ ಪರಿಸ್ಥಿತಿ ನಿಯಂತ್ರಿಸಲು ಶಾಂತಿ ಕಾಪಾಡಲು ನಮ್ಮ ಜಿಲ್ಲಾಧ್ಯಕ್ಷರನ್ನು ಅಲ್ಲಿಗೆ ಅವರನ್ನು ಆಹ್ವಾನಿಸಿದ್ದರು. ಪೊಲೀಸರ ಆಹ್ವಾನದ ಮೇರೆಗೆ ನಮ್ಮ ಜಿಲ್ಲಾಧ್ಯಕ್ಷರು ಪೊಲೀಸ್ ಜೀಪ್ ಹತ್ತಿ ಮೈಕ್‌ನಲ್ಲಿ ಎಲ್ಲರೂ ಶಾಂತವಾಗಿರುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರು ಕೇವಲ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡಿ ಪಲಾಯನ ಮಾಡುತ್ತಿರುವುದೇಕೆ? ಅವರ ವಿರುದ್ಧ ಕ್ರಮ ಯಾಕೆ ಕೈಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

ಕಲ್ಲು ತೂರಾಟದಲ್ಲಿ ಅವರಿಗೂ ಗಾಯಗಳಾಗಿವೆ. ಕರ್ನಾಟಕದಲ್ಲಿ ನೈತಿಕ ಪೊಲೀಸ್‌ಗಿರಿಯನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಮತ್ತು ಅಲ್ಪಸಂಖ್ಯಾತರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರು.

ಇದೇ ವೇಳೆ ಮಠಗಳಿಗೆ ನೀಡುವ ಅನುದಾನದಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂಬ ಸ್ವಾಮೀಜಿಗಳ ಆರೋಪಕ್ಕೆ ಸರ್ಕಾರ ಪ್ರತಿಕ್ರಿಯೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು