News Karnataka Kannada
Saturday, April 27 2024
ಬೆಂಗಳೂರು ನಗರ

ಹೂ ಮಾರುಕಟ್ಟೆ ನಿರ್ಮಾಣ: ಸರ್ಕಾರದಿಂದ 10 ಎಕರೆ ಜಾಗ ಮಂಜೂರು

Flower
Photo Credit :

ಬೆಂಗಳೂರು : ರಾಜ್ಯದ ರೈತರು ಬೆಳೆದ ಹೂಗಳನ್ನು ಮಾರಾಟ ಮಾಡಲು ಬೆಂಗಳೂರು ನಗರದಲ್ಲಿ ವ್ಯವಸ್ಥಿತವಾದ ಮಾರುಕಟ್ಟೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಹೆಬ್ಬಾಳ ಪಶುವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ ಜಾಗದಲ್ಲಿ 10 ಏಕರೆ ಜಾಗವನ್ನು ತೋಟಗಾರಿಕಾ ಇಲಾಖೆಗೆ ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಹಲವಾರು ವರ್ಷಗಳಿಂದ ರಾಜ್ಯದ ರೈತರು ತಾವು ಬೆಳೆದ ಹೂಗಳನ್ನು ಮಾರಾಟ ಮಾಡಲು ಸರಿಯಾದ ಮಾರುಕಟ್ಟೆಯ ವ್ಯವಸ್ಥೆ ಇರಲಿಲ್ಲ. ಕೆ. ಆರ್‌ ಮಾರುಕಟ್ಟೆಯಲ್ಲಿ ಸರಿಯಾದ ಜಾಗವಿಲ್ಲದೆ ಇಕ್ಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿತ್ತು. ಈ ಹಿನ್ನಲೆಯಲ್ಲಿ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿರುವ ಜಾಗವನ್ನು ನೀಡುವಂತೆ ಈ ಹಿಂದೆ ಪತ್ರ ಬರೆದು ರಾಜ್ಯ ಸರಕಾರಕ್ಕೆ ಒತ್ತಾಯಿಸಿತ್ತು.
ಅದರ ಫಲಶೃತಿಯಾಗಿ ತೋಟಗಾರಿಕಾ ಇಲಾಖೆಗೆ 10 ಎಕರೆಗಳ ಜಾಗವನ್ನು ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದು ಬಹಳ ಸ್ವಾಗತಾರ್ಹ ವಿಷಯವಾಗಿದೆ ಎಂದು ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ ಎಂ ಅರವಿಂದ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು