ಬೆಂಗಳೂರು : ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ನಿರ್ಬಂಧಯೇರಲು ತೀರ್ಮಾನಿಸಲಾಗಿದೆ. ಹೈರಿಸ್ಕ್ ದೇಶಗಳಿಂದ ಆಗಮಿಸಿದ ಹಲವಾರು ಮಂದಿಗೆ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಈ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ.ಇದುವರೆಗೂ ಓಮಿಕ್ರಾನ್ ಸೋಂಕು ಕಾಣಿಸಿಕೊಳ್ಳುವ ವ್ಯಕ್ತಿಗಳನ್ನು ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ, ಇನ್ನು ಮುಂದೆ ಹೈರಿಸ್ಕ್ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರಿಗೆ ಪಾಸಿಟಿವ್ ಬರಲಿ ಇಲ್ಲವೆ ನೆಗಿಟಿವ್ ಇರಲಿ ಅವರಿಗೆ ನಗರದ ಹೊರವಲಯಗಳಲ್ಲೇ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ.ಬೇರೆ ದೇಶಗಳಿಂದ ಬರುವ ಪ್ರಯಾಣಿಕರು ಹೊರ ವಲಯದಲ್ಲಿರುವ ಹೋಟೆಲ್ಗಳಲ್ಲಿ ಕಡ್ಡಾಯವಾಗಿ 15 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಬೇಕು. ಈ ಸಂದರ್ಭದಲ್ಲಿ ಪ್ರಯಾಣಿಕರೇ ಸರ್ಕಾರ ನಿಗಧಿ ಪಡಿಸಿರುವ ಹೋಟೆಲ್ ದರವನ್ನು ಪಾವತಿಸಬೇಕಾಗುತ್ತದೆ.