ಬೆಂಗಳೂರು: ಹಲೋ ತಿಂಗಳುಗಳಿಂದ ಚರ್ಚೆಯಲ್ಲಿರುವ ಶಾಲಾ-ಕಾಲೇಜುಗಳ ಪುನರಾರಂಭ ವಿಷಯಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಕೊನೆಗೂ ಶಾಲೆಗಳ ಆರಂಭಕ್ಕೆ ಸಿಕ್ಕಿತು ಗ್ರೀನ್ ಸಿಗ್ನಲ್.
ಶಾಲಾ-ಕಾಲೇಜುಗಳ ಪುನರಾರಂಭ ಪ್ರಕ್ರಿಯೆಯ ಬಗ್ಗೆ ಸಭೆ ನಡೆಸಿದ್ದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿತ್ತು, ಜನವರಿ 1 ರಿಂದ ಹತ್ತು ಮತ್ತು 12ನೇ ತರಗತಿ ಮಕ್ಕಳಿಗೆ ಶಾಲೆಯನ್ನು ಆರಂಭಿಸುವುದಾಗಿ ಹೇಳಿದ್ದು, 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮದ ಮೂಲಕ ಶೈಕ್ಷಣಿಕ ಚಟುವಟಿಕೆ ಪುನರಾರಂಭಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಈ ಬಗ್ಗೆ ಮಾತನಾಡಿ, ಜನವರಿ 1 ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು. ಪ್ರಾರಂಭದ ದಿನಗಳಲ್ಲಿ 19 12ನೇ ತರಗತಿ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿ ತರಗತಿಗೆ ಬರುವಂತೆ ಹೇಳಲಾಗುವುದು. ಅದರೊಂದಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ನೀಡಲೇಬೇಕು. ಇವೆಲ್ಲದರ ಜೊತೆ ಆನ್ಲೈನ್ ಹಾಗೂ ಆಫ್ಲೈನ್ ಎರಡು ರೀತಿಯ ತರಗತಿಗಳಿಗೆ ಸೇರಲು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.