News Karnataka Kannada
Sunday, May 05 2024
ಬೆಂಗಳೂರು ನಗರ

102 ಕವಿಗಳಿಂದ ಕವನ ಸಂಗ್ರಹಿಸಿ ಬಿಡುಗಡೆಗೆ ಮುಂದಾದ ಅಪ್ಪಟ ಅಪ್ಪು ಅಭಿಮಾನಿಗಳು

Punith Rajkumar
Photo Credit : News Kannada

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಅಪ್ಪಟ ಅಪ್ಪು ಅಭಿಮಾನಿ ಜೆ.ಡಿ.ದನ್ನೂರ್ ಹಾಗೂ ಅವರ ತಂಡ ಅಪ್ಪು ನೆನಪಿನಲ್ಲಿಯೇ  ಲಕ್ಷಾಂತರ ರೂಪಾಯಿ ಹಣವನ್ನು ಖರ್ಚು ಮಾಡಿ ವಿಶೇಷ ನಮನ ಸಲ್ಲಿಸಲು ಮುಂದಾಗಿದ್ದಾರೆ.

102 ಕವಿಗಳಿಂದ ಕವನಗಳನ್ನು ಸಂಗ್ರಹಿಸಿ, ‘ರಾಜರತ್ನ ಕವಿ ನಮನ ಕವನ ಸಂಕಲನ’ ಹಾಗೂ ‘ರಾಜರತ್ನ ಗೀತ ನಮನ’ ಧ್ವನಿ ಮುದ್ರಿಕೆಯನ್ನು ಹೊರತರಲು ಮುಂದಾಗಿದ್ದಾರೆ.

ಇಂತಹದ್ದೊಂದು ಸಾಹಸಕ್ಕೆ ಮುಂದಾಗಿದೆ.

ಮೈಸೂರು, ಕಲಬುರ್ಗಿ, ಬೆಂಗಳೂರು, ಮಂಡ್ಯ, ಕಾರವಾರ, ಗದಗ, ರಾಯಚೂರ್, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿರುವ 102 ಕವಿಗಳಿಂದ ಪುನೀತ್ ರಾಜಕುಮಾರ್ ಬಗ್ಗೆ ಬರೆದ ಕವನಗಳನ್ನು ಸಂಗ್ರಹಿಸಿದ್ದಾರೆ. ಈ ಕವನಗಳನ್ನು ‘ರಾಜರತ್ನ ಕವಿ ನಮನ ಕವನ’ ಸಂಕಲನದಲ್ಲಿ ಸಂಗ್ರಹಿಸಿ, 5 ಸಾವಿರ ಪ್ರತಿಗಳನ್ನು ಮುದ್ರಿಸಿ ಅಭಿಮಾನಿಗಳಿಗೆ ಹಂಚಲಿದ್ದಾರೆ.

ಅಪ್ಪು ಅಭಿಮಾನಿಗಳು ಈ ಕವನ ಸಂಕಲನವನ್ನು ಅಭಿಮಾನಿಗಳಿಗೆ ಉಚಿತವಾಗಿ ನೀಡಲು ಮುಂದಾಗಿದ್ದಾರೆ. ಅಪ್ಪು ಅಭಿಮಾನಿಗಳ ಜೊತೆ ನಾಡಿನ ಗ್ರಂಥಾಲಯಕ್ಕೆ ಉಚಿತವಾಗಿ ಈ ಕವನ ಸಂಕಲನ ನೀಡಲಿದ್ದಾರೆ. ವಿಶೇಷ ಅಂದ್ರೆ, ಈ ಕವನ ಸಂಕಲನ ಪ್ರತಿ ಪುಟದಲ್ಲೂ ಪುನೀತ್ ರಾಜ್‌ಕುಮಾರ್ ಅವರ ವಿಭಿನ್ನವಾದ ಭಾವಚಿತ್ರವನ್ನು ಬಳಸಲಿದ್ದಾರೆ.

ಕವನ ಸಂಕಲನದ ಜೊತೆಗೆ ಪುನೀತ್ ರಾಜ್‌ಕುಮಾರ್‌ಗೆ ಸಂಬಂಧಿಸಿದ ಎಂಟು ಗೀತೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಜಮಖಂಡಿಯ ಜೆ.ಡಿ.ದನ್ನೂರ್, ನಿ.ಶ್ರೀಶೈಲ, ಕಲಬುರಗಿಯ ಗಿರಿಜಾ ಇಟಗಿ, ಕೊಪ್ಪಳದ ರಂಗನಾಥ ಅಂಬಿಗೇರ ಸೇರಿದಂತೆ ಹಲವು ಸಾಹಿತ್ಯ ರಚಿಸಿದ್ದಾರೆ. ಮೃತ್ಯೂಂಜಯ ದೊಡವಾಡ ಈ ಹಾಡುಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಬೆಂಗಳೂರಿನ ಖ್ಯಾತ ಗಾಯಕರಾದ ಅಜಯ್‌ ವಾರಿಯರ್‌, ಪ್ರಭಾ ಇನಾಂದಾರ ಉಷಾ ಕಸ್ತೂರಿ ಶಂಕರ ಧ್ವನಿ ನೀಡಿದ್ದಾರೆ.

ರಾಜರತ್ನ ಕವಿ ನಮನ, ಗೀತ ನಮನ ರಿಲೀಸ್ ಯಾವಾಗ?

ಬೆಂಗಳೂರಿನ ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯಲ್ಲಿ ಮಾರ್ಚ್ 30 ರಂದು ರಾಜರತ್ನ ಕವಿ ನಮನ ಹಾಗೂ ಗೀತ ನಮನವನ್ನು ಬಿಡುಗಡೆ ಮಾಡಲಿದ್ದಾರೆ. ಹಿರಿಯ ಚಿತ್ರನಟಿ ಡಾ. ಜಯಮಾಲಾ ಕವನ ಸಂಕಲನ ಹಾಗೂ ಹಾಡುಗಳನ್ನು ರಿಲೀಸ್ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ನಾಡೋಜ ಮನು ಬಳಿಗಾರ ಅಧ್ಯಕ್ಷತೆ ವಹಿಸಲಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು