ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್-2024ರ ಕರ್ನಾಟಕದಿಂದ ಕನಿಷ್ಠ ನೂರು ಜನ ಕ್ರೀಡಾಪಟುಗಳನ್ನು ಕಳುಹಿಸುವ ಯೋಜನೆ ರೂಪಿಸಲಾಗಿದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
ಈಗಾಗಲೇ ರಾಜ್ಯದ 35 ಕ್ರೀಡಾಪಟುಗಳನ್ನು ಗುರುತಿಸಲಾಗಿದೆ. ಅವರಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಹೇಳಿದ್ದಾರೆ. ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತದೆ. ದೇಶಾದ್ಯಂತ 7,000 ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದೆ. ಮುಂದಿನ ಮಾರ್ಚ್ 5 ರಿಂದ 12ರವರೆಗೆ ಖೇಲೋ ಇಂಡಿಯಾ ಗೇಮ್ಸ್ ನಡೆಯಲಿದೆ. ಕಳೆದ 4 ವರ್ಷಗಳಿಂದ ಸ್ಥಗಿತಗೊಂಡಿರುವ ಜಕ್ಕೂರು ವೈಮಾನಿಕ ತರಬೇತಿ ಶಾಲೆ ಸೆಪ್ಟೆಂಬರ್ನಿಂದ ಆರಂಭವಾಗಲಿದೆ. ಅಲ್ಲಿ ವಾರ್ಷಿಕ 100 ಪೈಲಟ್ಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ತರಬೇತಿ ಶಾಲೆ ಅಭಿವೃದ್ಧಿ ಮಾಡಲಾಗುವುದು ಎಂದಿದ್ದಾರೆ.
2024ರ ಒಲಿಂಪಿಕ್ಸ್ಗೆ ಕರ್ನಾಟಕದಿಂದ 100 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ: ಸಚಿವ ನಾರಾಯಣಗೌಡ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.