News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಯ ʻತ್ರಿವರ್ಣ ಸಂಭ್ರಮʼ ಬೈಕ್‌ ರ‍್ಯಾಲಿ ಆರಂಭ

Aam Aadmi Party's 'tricolour' bike rally begins
Photo Credit : News Kannada

ಬೆಂಗಳೂರು, ಆ.10: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ರಹಿತ ಬೆಂಗಳೂರಿಗೆ ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು “ತ್ರಿವರ್ಣ ಸಂಭ್ರಮ” ಬೈಕ್‌ ರ‍್ಯಾಲಿಗೆ ಬುಧವಾರ ಚಾಲನೆ ನೀಡಿತು. ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ತ್ರಿವರ್ಣ ಧ್ವಜ ಹೊಂದಿದ ನೂರಾರು ಬೈಕ್‌ಗಳಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಹಸಿರು ನಿಶಾನೆ ತೋರಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ, “ಅವ್ಯಾಹತವಾಗಿ ನಡೆಯುತ್ತಿರುವ ಬಿಜೆಪಿಯ ಭ್ರಷ್ಟಾಚಾರದಿಂದಾಗಿ ಬೆಂಗಳೂರಿನ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಸರ್ಕಾರದ ಬೊಕ್ಕಸದಿಂದ ಸಾವಿರಾರು ಕೋಟಿ ರೂಪಾಯಿ ಬಿಡುಗಡೆಯಾದರೂ ಜನರ ಸಮಸ್ಯೆಗಳು ಮಾತ್ರ ಹಾಗೆಯೇ ಉಳಿದಿವೆ. ಜನರ ತೆರಿಗೆ ಹಣವು ಜನಪ್ರತಿನಿಧಿಗಳ ಜೇಬು ಸೇರಿ ಅವರು ಮಾತ್ರ ಅಭಿವೃದ್ಧಿ ಹೊಂದುತ್ತಿದ್ದಾರೆ. ಬೆಂಗಳೂರಿನ ಜನತೆಯು ಈ ಭ್ರಷ್ಟ ವ್ಯವಸ್ಥೆಗೆ ಬದಲಾವಣೆ ತರುವ ಸಂಕಲ್ಪ ಮಾಡುವ ಸಮಯ ಬಂದಿದೆ” ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಮಾತನಾಡಿ, “ಇಂದು ಆರಂಭವಾದ ಬೈಕ್‌ ರ‍್ಯಾಲಿಯು ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ತಲುಪಲಿದೆ. ಆಗಸ್ಟ್‌ 15ರ ಸ್ವಾತಂತ್ರ್ಯ ದಿನದ ತನಕ ರ‍್ಯಾಲಿ ಮುಂದುವರಿಯಲಿದೆ. ಅಂದು ಬನಪ್ಪ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಸಿ ರ‍್ಯಾಲಿಯನ್ನು ಅಂತ್ಯಗೊಳಿಸಲಾಗುತ್ತದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರದ ವಿರುದ್ಧ ಈ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ಸರ್ಕಾರಿ ಕಚೇರಿಗಳಲ್ಲಿ ಸಣ್ಣ ಸೇವೆ ಪಡೆಯಲು ಕೂಡ ಲಂಚ ನೀಡಬೇಕಾದಂತಹ ವಾತಾವರಣವನ್ನು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ನಿರ್ಮಿಸಿವೆ. ರಸ್ತೆಗಳಲ್ಲಿ ಗುಂಡಿಗಳು, ಅಸಮರ್ಪಕ ಪಾದಚಾರಿ ಮಾರ್ಗಗಳು, ಅವ್ಯವಸ್ಥಿತ ಕಸ ವಿಲೇವಾರಿ, ಮೂಲ ಸೌಕರ್ಯಗಳಿಲ್ಲದ ಆರೋಗ್ಯ ಕೇಂದ್ರಗಳು, ನಿರ್ಲಕ್ಷ್ಯಕೊಳಗಾದ ಸರ್ಕಾರಿ ಶಾಲೆಗಳು, ರಾಜಕಾಲುವೆ ಒತ್ತುವರಿ ಮುಂತಾದ ಅನೇಕ ಸಮಸ್ಯೆಗಳು ಬೆಂಗಳೂರನ್ನು ಕಾಡುತ್ತಿದ್ದರೂ ಸರ್ಕಾರ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಜನತೆಗೆ ಸೂಕ್ತ ಮೂಲಸೌಕರ್ಯಗಳು ದೊರೆಯದಿರುವುದು ದುರಂತ” ಎಂದು ಹೇಳಿದರು.

ರ‍್ಯಾಲಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಪಕ್ಷದ ಹಿರಿಯ ಮುಖಂಡರುಗಳಾದ ಸಂಚಿತ್ ಸೆಹ್ವಾನಿ ,ಕೆ ಮಥಾಯಿ, ಜಗದೀಶ್.ವಿ ಸದಂ, ಸುರೇಶ್ ರಾಥೋಡ್,ಫರೀದ್, ಚನ್ನಪ್ಪಗೌಡ ನಲ್ಲೂರು,ಜ್ಯೋತಿಷ್ ಕುಮಾರ್ಸೇರಿದಂತೆ ಅನೇಕ ಮುಖಂಡರುಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು