News Karnataka Kannada
Saturday, May 04 2024
ಬೆಂಗಳೂರು ನಗರ

ನಟ ಸುದೀಪ್ ಬೆಂಬಲದಿಂದ ಪಕ್ಷ, ಪ್ರಚಾರಕ್ಕೆ ದೊಡ್ಡ ಶಕ್ತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Actor Sudeep's support will be a big strength for the party and campaign: Cm Basavaraj Bommai
Photo Credit : News Kannada

ಬೆಂಗಳೂರು : ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನಗರದ ಖಾಸಗಿ ಹೋಟೇಲ್ ನಲ್ಲಿ ನಟ ಸುದೀಪ್ ಅವರೊಂದಿಗೆ ಕರೆಯಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಚಿತ್ರನಟ ಸುದೀಪ್ ಅವರ ಬೆಂಬಲಕ್ಕೆ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸಿದ ಮುಖ್ಯಮಂತ್ರಿಗಳು, ಅವರ ನಿರ್ಣಯವನ್ನು ಹೃದಯಪೂರ್ವಕವಾಗಿ ಸ್ವಾಗತಿಸುವುದಾಗಿ ಹೇಳಿದರು. ಸುದೀಪ್ ಅವರು ಜನಪ್ರಿಯ ನಟರಾಗಿರುವುದರಿಂದ ಅವರ ಪ್ರಚಾರವನ್ನು ಸೂಕ್ತವಾಗಿ ಆಯೋಜಿಸಲಾಗುವುದು. ಅವರ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು. ಸುದೀಪ್ ಅವರಿಗೆ ದೇಶದ ಹಾಗೂ ಕರ್ನಾಟಕದ ಬಗ್ಗೆ ಅವರದ್ದೇ ಆದ ವಿಚಾರಧಾರೆಗಳಿವೆ. ಅವುಗಳನ್ನು ಮುಂದೆ ಪ್ರಚಾರದಲ್ಲಿ ತಿಳಿಸುತ್ತಾರೆ. ನಮ್ಮ ವೈಯಕ್ತಿಕ ಸಂಬಂಧದಿಂದ ನಿರ್ಣಯ ತೆಗೆದುಕೊಂಡಿದ್ದಾರೆ. ನಾನು ಸೂಚಿಸುವಲ್ಲಿ ಪ್ರಚಾರ ಮಾಡುತ್ತಾರೆ. ಬಿಜೆಪಿ ಪರವಾಗಿಯೂ ಅವರು ಪ್ರಚಾರ ಮಾಡುವುದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದ ಅವರು ಅವರ ತಂದೆತಾಯಿಗಳಿಗೂ ಕೃತಜ್ಞತೆಗಳನ್ನು ತಿಳಿಸಿದರು.

ಅವರ ಸಮಯ, ಗೌರವವನ್ನು ಗಮನದಲ್ಲಿಟ್ಟುಕೊಂಡು ಸುದೀಪ್ ಅವರು ಪ್ರಚಾರಕ್ಕೆ ನಿಂತಿರುವುದು ಕರ್ನಾಟಕದಲ್ಲಿ ವಿದ್ಯುತ್ ಸಂಚಲನವಾದಂತಾಗಿದೆ. ವಿಶೇಷವಾಗಿ ಯುವಕರು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ. ಅವರ ಬೆಂಬಲವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ಪತ್ರಿಕಾಗೋಷ್ಠಿ ಯಲ್ಲಿ ಸಚಿವರಾದ ಆರ್. ಅಶೋಕ್, ಡಾ. ಸುಧಾಕರ್, ಮುನಿರತ್ನ ಹಾಜರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು