News Karnataka Kannada
Monday, May 20 2024
ಬೆಂಗಳೂರು ನಗರ

ಬಿ.ಕೆ. ಹರಿಪ್ರಸಾದ್‌ ಮೇಲೆ ಎಐಸಿಸಿ ಶಿಸ್ತುಕ್ರಮ ಕೈಗೊಳ್ಳಬೇಕು: ಮಾಲೂರು ಕೈ ಶಾಸಕ ನಂಜೇಗೌಡ

AICC should take disciplinary action against B K Hariprasad: Malur Kai MLA Nanjegowda
Photo Credit : News Kannada

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಕಾಂಗ್ರೆಸ್‌ ಪಕ್ಷದಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎಂದು ಹೇಳಿದ್ದಾರೆ. ಹರಿಪ್ರಸಾದ್‌ ಅವರನ್ನು ಮಂತ್ರಿ ಮಾಡಿಲ್ಲ ಎಂದು ಈ ಹಿಂದೆ ಪಕ್ಷ ನೀಡಿದ್ದ ಅವಕಾಶ ಮರೆತು ಮಾತನಾಡುವುದು ಖಂಡನೀಯ ಎಂದು ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡ ಆರೋಪಿಸಿದರು.

ಹರಿಪ್ರಸಾದ್‌ ನೀಡಿದ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲ ರೀತಿ ಅವಕಾಶ ಪಡೆದವರು ಹರಿಪ್ರಸಾದ್‌, ಎಐಸಿಸಿವರೆಗೆ ಅವರಿಗೆ ಸ್ಥಾನಮಾನ ದೊರೆತಿದೆ. ಆದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ವಿರುದ್ಧವೇ ಈಗ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಪಡೆದಿದೆ. ಅವರಷ್ಟು ದೊಡ್ಡ ನಾಯಕ ಹರಿಪ್ರಸಾದ್‌ ಅಲ್ಲ. ಅವರು ಅದನ್ನು ಅರ್ಥ ಮಾಡಿಕೊಳ್ಳಬೇಕು. ಅವರ ಮೇಲೆ ಕೆಪಿಸಿಸಿ, ಎಐಸಿಸಿ ಶಿಸ್ತುಕ್ರಮ ಕೈಗೊಳ್ಳಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು