ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ದೇಶದ ಶಕ್ತಿಯ ಪ್ರತೀಕವಾಗಿದ್ದು, ರಾಷ್ಟ್ರದ ಘನತೆ ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಚಾಲನೆ ನೀಡಿ ಮಾತನಾಡಿದರು.
ದೇಶ ಈಗ ರಕ್ಷಣಾ ಸಾಮಗ್ರಿಯನ್ನು ರಫ್ತು ಮಾಡುವ ಹಂತಕ್ಕೆ ತಲುಪಿದೆ. ರಕ್ಷಣಾ ಕ್ಷೇತ್ರದಲ್ಲಿ ತಂತ್ರಜ್ಞಾನ ವಿಚಾರದಲ್ಲಿ ಯಾರು ಮುಂಚೂಣಿಯಲ್ಲಿ ಇರುತ್ತಾರೋ, ಅವರು ಜಯದ ಹಾದಿಯಲ್ಲಿರುತ್ತಾರೆ. 2025ರ ಹೊತ್ತಿಗೆ ಭಾರತದ ರಕ್ಷಣಾ ರಫ್ತು ಪ್ರಮಾಣ 5 ಬಿಲಿಯನ್ ಡಾಲರ್ಗೆ ಏರಲಿದೆ ಎಂದರು.
ಬಜೆಟ್ನಲ್ಲಿ ರಕ್ಷಣಾ ಕ್ಷೇತ್ರಗಳಿಗೆ ಸಂಬಂಧಿಸಿದ ವಿದೇಶಿ ಹೂಡಿಕೆ ನಿಯಮಗಳನ್ನು ಸರಳಗೊಳಿಸಲಾಗಿದೆ ಎಂದು ವಿವರಿಸಿದರು.