ಬೆಂಗಳೂರು: ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕರ್ನಾಟಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದೀಗ ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅವರ ರಾಜಕೀಯ ನಡೆಯನ್ನು ಪ್ರಶಂಶಿಸಿದ್ದಾರೆ.
ಅಲ್ಲದೇ ಪಕ್ಷ ನಿಮ್ಮ ಜೊತೆಗಿದೆ ಎಂದು ಭರವಸೆ ನೀಡಿದ್ದಾರೆ. ಮೋದಿ ಬೆಳಗ್ಗೆ ಕರೆ ಮಾಡಿದಾಗ ನನಗೆ ಅಚ್ಚರಿ ಆಯ್ತು. ಮೋದಿ ಅವರು ಹೀಗೆ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುತ್ತಿರುವುದು ಸಂತೋಷವಾಗಿದೆ. ಇದು ಎಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ ಎಂದು ಈಶ್ವರಪ್ಪ ಸಂತೋಷ ವ್ಯಕ್ತಪಡಿಸಿದ್ದಾರೆ.