ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಇವಿ ( ಎಲೆಕ್ಟ್ರಿಕ್ ವೆಹಿಕಲ್) ಅಭಿಯಾನ ೨೦೨೨ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬೆಂಗಳೂರಿನ ೧೫೨ ಇವಿ ವೆಹಿಕಲ್ ಚಾರ್ಜಿಂಗ್ ಸ್ಟೇಷನ್ ಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದರು.
ಸಮಾರಂಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಉಮೇಶ ಕತ್ತಿ, ವಿ. ಸುನಿಲ್ ಕುಮಾರ, ಶಾಸಕ ನಾಗರಾಜ ಯಾದವ್, ಕೆ ಇ ಆರ್ ಸಿ ಅಧ್ಯಕ್ಷ ಪಿ. ರವಿಕುಮಾರ, ಸಿಎಂ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ, ಶಾಸಕ ಹಾಲಪ್ಪ, ಕೆಪಿಟಿಸಿಎಲ್ ಎಂಡಿ ಡಾ. ಎನ್. ಮಂಜುಳಾ, ಬೆಸ್ಕಾಂ ಎಂಡಿ ಪಿ. ರಾಜೇಂದ್ರ ಚೋಳನ್, ಚಂದು ಪಾಟೀಲ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.