ಆನೇಕಲ್: ಬಿಬಿಎ ವಿದ್ಯಾರ್ಥಿಯೋರ್ವ ಖಾಸಗಿ ಕಾಲೇಜಿನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ನಲ್ಲಿ ಮಂಗಳವಾರ ನಡೆದಿದೆ.
ಮೃತ ಯುವಕನನ್ನು ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿ ವಿಘ್ನೇಶ್.ಕೆ (19)ಎಂದು ಗುರುತಿಸಲಾಗಿದೆ. ವಿಘ್ನೇಶ್ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದನು. ಮಂಗಳವಾರ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದು ಬಂದಿದೆ.
ಈ ಪ್ರಕರಣ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.