ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆ 33 ಬ್ಲಾಕ್ ಶಿಕ್ಷಣ ಅಧಿಕಾರಿಗಳನ್ನು ಕಾರ್ಯನಿರ್ವಾಹಕೇತರ ಹುದ್ದೆಗಳಿಗೆ ವರ್ಗಾವಣೆ ಮಾಡಿದೆ. ಈ ವರ್ಗಾವಣೆಯ ಕಾರಣವನ್ನು ಉಲ್ಲೇಖಿಸಲಾಗಿಲ್ಲ. ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯ ಕೊನೆಯ ದಿನಾಂಕದ ನಂತರ ಮಾಡಲಾದ ಈ ವರ್ಗಾವಣೆಯು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮೂಲಗಳ ಪ್ರಕಾರ, ವರ್ಗಾವಣೆಗೊಂಡಿರುವ ಈ ಬಿಇಒಗಳನ್ನು ತಕ್ಷಣವೇ ಬಿಡುಗಡೆ ಮಾಡಿ ಮತ್ತು ಈ ಹುದ್ದೆಗಳಿಗೆ ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸುವಂತೆ ಇಲಾಖೆ ಎಲ್ಲಾ ಡಿಡಿಪಿಐಗಳಿಗೆ ತಿಳಿಸಿದೆ.
ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅವರ ಆರೋಪದ ನಂತರ ಸರ್ಕಾರವು ಇಲಾಖೆಯಲ್ಲಿನ ಭ್ರಷ್ಟಾಚಾರದ ಆರೋಪಗಳನ್ನು ಪರಿಶೀಲಿಸಲು ತಂಡವನ್ನು ರಚಿಸಿತು.