ಬೆಂಗಳೂರು: ಪ್ರಶಸ್ತಿಗೆ ಪರಿಗಣಿಸದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿದ್ದು, ಹೈಕೋರ್ಟ್ ಆದೇಶದಂತೆ ತಮ್ಮ ಹೆಸರನ್ನು ಪರಿಗಣಿಸುವಂತೆ ಹಿರಿಯ ಸಾಹಿತಿ ಬಿ. ವಿ. ಸತ್ಯನಾರಾಯಣ ರಾವ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ತಾವು ರಚಿಸಿರುವ 108 ಸಾಹಿತ್ಯ ಕೃತಿಗಳನ್ನು ಮುಂದಿಟ್ಟುಕೊಂಡು ನವೆಂಬರ್ 1 ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ನಗರದ ರವೀಂದ್ರ ಕಲಾಕ್ಷೇತ್ರದ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಹೈಕೋರ್ಟ್ ಆದೇಶ (WP 50439/ 2019 ರ)ದ ಉಲ್ಲಂಘನೆಯಾಗಿದ್ದು, ತಮ್ಮ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಬೇಕು ಎಂದು ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಅನನ್ಯ ಕೃತಿಗಳನ್ನು ರಚಿಸಿರುವ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅನೇಕ ಸಾಧನೆ ಮಾಡಿದ್ದರೂ ಸಹ ನನ್ನನ್ನು ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸದ ಕಾರಣ ಉಚ್ಚ ನ್ಯಾಯಾಲಯದಲ್ಲಿ 2013 ರಿಂದ ನಾಲ್ಕು ಸಲ ಆದೇಶ ಪಡೆದರೂ ಸಹ ನನ್ನನ್ನು ಪ್ರಶಸ್ತಿಗೆ ಪರಿಗಣಿಸದಿರುವುದು ಕನ್ನಡ ಕಾವ್ಯಸಾಧಕನಾದ ನನಗೆ ತೀವ್ರ ವಿಷಾದವಾಗಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪಾರ್ಶ್ವವಾಯುವಿನ ಸಮಸ್ಯೆ ಹೊಂದಿರುವ ತಾವು ಕನ್ನಡ ಕಾವ್ಯಕ್ಕಾಗಿ ಜೀವನವನ್ನು ಮುಡುಪಿಟ್ಟು ಕೆಲಸ ಮಾಡುತ್ತಿದ್ದೇನೆ. ನನ್ನ ಕಾವ್ಯಸಾಧನೆಗಳನ್ನು ಪರಿಗಣಿಸಿ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು ಎಂದು ಅವರು ಕೋರಿದ್ದಾರೆ. ನಾನು ಮೂಲತಃ ಮ್ಯಾಕಾನಿಕಲ್ ಇಂಜಿನಿಯರ್, ಕೆಇಬಿಯಲ್ಲಿ ಕೆಲಸ ಮಾಡಿ ಸ್ವಯಂ ನಿವೃತ್ತಿ ಪಡೆದು ಸಾಹಿತ್ಯ ಕ್ಷೇತ್ರದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದೇನೆ. ಅರ್ಹತೆ ಇದ್ದರೂ ಪ್ರಶಸ್ತಿಗೆ ನನ್ನನ್ನು ಕಡೆಗಣಿಸಲಾಗಿದೆ ಎಂದು 75 ವರ್ಷ ವಯಸ್ಸಿನ ಬಿ.ವಿ. ಸತ್ಯನಾರಾಯಣರಾವ್ (ಕಾವ್ಯನಾಮ ಸತ್ಯವಿಠಲ) ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಜೀವನವನ್ನು ಪ್ರಾಚೀನ ಕಾವ್ಯ ಪರಂಪರೆಯ ಪುನರುಜೀವನಕ್ಕಾಗಿ ಮುಡುಪಿಟ್ಟು ಅದನ್ನು ಸಾಧಿಸಿ ಕಾವ್ಯ ಪ್ರಕಟಣೆಗಾಗಿ 2005ರಲ್ಲಿ ಸ್ವಯಂನಿವೃತ್ತಿ ಪಡೆದು ನೂರಾರು ಕೃತಿಗಳನ್ನು ಈ ವರೆಗೆ ರಚಿಸಿದ್ದೇನೆ. ಹಾಲುಮತ ಮಹಾಕಾವ್ಯ, ಶ್ರೀ ಶಿವಕುಮಾರ ಸ್ವಾಮಿ ಗುರುಚರಿತ್ರೆ ಮೊದಲಾದ 13 ಭಾಮಿನಿ ಷಟ್ನದಿ ಕಾವ್ಯಗಳ ಸಾಧನೆ ಜೊತೆಗೆ ಡಾ. ಅಂಬೇಡ್ಕರ್ ಶತಕ, ವಿವೇಕಾನಂದ ಶತಕ ಮೊದಲಾದ 15 ಶತಕ ಕಾವ್ಯಗಳನ್ನು ರಚಿಸಿರುವುದಾಗಿ ತಿಳಿಸಿದ್ದಾರೆ.

‘ಬಸವೇಶ ಭಾರತಿ’ ಎಂಬ ಕನ್ನಡದ ಪ್ರಪ್ರಥಮ ಲಾವಣಿ ಕಾವ್ಯವನ್ನು ಪ್ರಕಟಿಸಿದ್ದು, ಕನ್ನಡದಲ್ಲಿ ಅತ್ಯಂತ ಹೆಚ್ಚಿನ ಲಾವಣಿ ಬರೆದ ಕವಿಯಾಗಿದ್ದೇನೆ. ಜೊತೆಗೆ ಲಾವಣಿ ಸಂಪುಟದ ಸಾಧನೆ ಮಾಡಿದ್ದು, ಕನ್ನಡದ ಪ್ರಪ್ರಥಮ ಭೋಗ ಷಟ್ಟದಿ ಮಹಾಕಾವ್ಯ ‘ಸೊನ್ನಲಿಗೆ ಸಿದ್ಧರಾಮ ವಿಲಾಸ’ದ ಮೂಲಕ ನಾಡಿಗೆ ಚಿರಪರಿಚಿತರಾಗಿದ್ದೇನೆ ಎಂದು ಹೇಳಿದ್ದಾರೆ.

ಅಖಂಡ ಕರ್ನಾಟಕದ ಎಲ್ಲಾ ಜಿಲ್ಲೆಗಳ ಸಾಂಸ್ಕೃತಿಕ ಪರಂಪರೆಯ ಚಿತ್ರಣದ ‘ಕರ್ನಾಟಕ ದರ್ಶನ’ ಕೃತಿ ರಚಿಸಿದ್ದು, 5ನೇ ತರಗತಿಯ ಭುವನೇಶ್ವರಿ ಪದ್ಯ ಹಾಗೂ 9ನೇ ತರಗತಿಯ ಕಾವ್ಯ ಸಂಗಮ ಕೃತಿಗಳನ್ನು ಸಹ ರಚಿಸಿದ್ದೇನೆ. ಭಾಮಿನಿ ಷಟ್ಟದಿಕಾರ, ಭೋಗ ಷಟ್ಟದಿಕಾರ, ದ್ವಿಪದಿ ಮತ್ತು ಚತುಷ್ಪದಿಗಳ ರಚನಾಕಾರ, ಲಾವಣಿಕಾರ, ನಾಟಕಕಾರ, ಗೀತ ರಚನಾಕಾರ ಮತ್ತು ಇತಿಹಾಸಕಾರರಾಗಿಯೂ ಗುರುತಿಸಿಕೊಂಡಿದ್ದೇನೆ. ಸಂಗೀತ ಭಾರತೀ, ವ್ಯಾಖ್ಯಾನ ಸಂಪುಟ 1 ಮತ್ತು 2 ಪ್ರಕಟಣೆಗೊಂಡಿದೆ. ಜ್ಞಾನಪೀಠ ಪ್ರಶಸ್ತಿಗಾಗಿ ಬರೆದ ಹಾಲುಮತ ಮಹಾಕಾವ್ಯ (ಭಾಮಿನಿ ಷಟ್ಟದಿ) ಪ್ರಕಟವಾಗಿದ್ದು ಈ ಸಾಧನೆಯನ್ನು ಪರಿಗಣಿಸುವಂತೆ ಬಿ. ವಿ. ಸತ್ಯನಾರಾಯಣ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Sneha Gowda

Recent Posts

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

26 seconds ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

5 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

14 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

25 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

26 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

49 mins ago