ಬೆಂಗಳೂರು: ವಂಶಪಾರಂಪರ್ಯ ಆಡಳಿತಕ್ಕೆ ಅವಕಾಶ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ನಾಯಕರು ಪದೇ ಪದೇ ಹೇಳುತ್ತಿದ್ದರೂ ವಾಸ್ತವದಲ್ಲಿ ಅಂತಹ ಪರಿಸ್ಥಿತಿಯಿಲ್ಲ. ರಾಜಕಾರಣಿಗಳು ತಮ್ಮ ಕುಟುಂಬದ ಸದಸ್ಯರು ರಾಜಕಾರಣದಲ್ಲಿ ಬೆಳೆಯುವುದನ್ನು ನೋಡಲು ಹಾತೊರೆಯುತ್ತಿರುತ್ತಾರೆ. ಇದಕ್ಕೆ ಬಿಜೆಪಿಯೂ ಹೊರತಾಗಿಲ್ಲ.
ಇದೇ ರೀತಿ ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ನಿಂದ ಬಿಜೆಪಿ ಸೇರಿದ ಸಚಿವ ಎಂಟಿಬಿ ನಾಗರಾಜ್ ಅವರು ಮುಂಬರುವ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ತಮ್ಮ ಪುತ್ರ ನಿತಿನ್ ಪುರುಷೋತ್ತಮ್ ನಾಗರಾಜ್ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಿದ್ದಾರೆ.
ನಾಗರಾಜ್ ಅವರು 2018ರಲ್ಲಿ ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡರಿಂದ ಸೋಲು ಕಂಡಿದ್ದರು. ಶರತ್ ಪ್ರಸ್ತುತ ಕಾಂಗ್ರೆಸ್ ನಲ್ಲಿ ಇದ್ದಾರೆ. ‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಎಲ್ಲರೂ ನಿತಿನ್ ಅವರನ್ನು ಬೆಂಬಲಿಸುವಂತೆ ಕೋರುತ್ತೇನೆ,’’ ಎಂದು ಎಂಟಿಬಿ ಮನವಿ ಮಾಡಿದ್ದಾರೆ,
ಎಂಟಿಬಿ ನಾಗರಾಜ್ ದೇಶದ ಶ್ರೀಮಂತ ಜನಪ್ರತಿನಿಧಿಗಳಲ್ಲಿ ಒಬ್ಬರಾಗಿದ್ದಾರೆ.