News Karnataka Kannada
Saturday, May 11 2024
ಬೆಂಗಳೂರು ನಗರ

ಹೊಸಕೋಟೆ ಕ್ಷೇತ್ರದಿಂದ ಪುತ್ರ ನಿತಿನ್‌ ಬಿಜೆಪಿ ಅಭ್ಯರ್ಥಿ: ಸಚಿವ ಎಂಟಿಬಿ ಘೋಷಣೆ

Bengaluru: Another "son rise" in BJP state unit
Photo Credit : By Author

ಬೆಂಗಳೂರು: ವಂಶಪಾರಂಪರ್ಯ ಆಡಳಿತಕ್ಕೆ ಅವಕಾಶ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ನಾಯಕರು ಪದೇ ಪದೇ ಹೇಳುತ್ತಿದ್ದರೂ ವಾಸ್ತವದಲ್ಲಿ ಅಂತಹ ಪರಿಸ್ಥಿತಿಯಿಲ್ಲ. ರಾಜಕಾರಣಿಗಳು ತಮ್ಮ ಕುಟುಂಬದ ಸದಸ್ಯರು ರಾಜಕಾರಣದಲ್ಲಿ ಬೆಳೆಯುವುದನ್ನು ನೋಡಲು ಹಾತೊರೆಯುತ್ತಿರುತ್ತಾರೆ. ಇದಕ್ಕೆ ಬಿಜೆಪಿಯೂ ಹೊರತಾಗಿಲ್ಲ.

ಇದೇ ರೀತಿ ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ ಸಚಿವ ಎಂಟಿಬಿ ನಾಗರಾಜ್ ಅವರು ಮುಂಬರುವ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ತಮ್ಮ ಪುತ್ರ ನಿತಿನ್ ಪುರುಷೋತ್ತಮ್ ನಾಗರಾಜ್ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಿದ್ದಾರೆ.

ನಾಗರಾಜ್ ಅವರು 2018ರಲ್ಲಿ ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡರಿಂದ ಸೋಲು ಕಂಡಿದ್ದರು. ಶರತ್ ಪ್ರಸ್ತುತ ಕಾಂಗ್ರೆಸ್‌ ನಲ್ಲಿ ಇದ್ದಾರೆ. ‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಎಲ್ಲರೂ ನಿತಿನ್ ಅವರನ್ನು ಬೆಂಬಲಿಸುವಂತೆ ಕೋರುತ್ತೇನೆ,’’ ಎಂದು ಎಂಟಿಬಿ ಮನವಿ ಮಾಡಿದ್ದಾರೆ,

ಎಂಟಿಬಿ ನಾಗರಾಜ್ ದೇಶದ ಶ್ರೀಮಂತ ಜನಪ್ರತಿನಿಧಿಗಳಲ್ಲಿ ಒಬ್ಬರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು