News Karnataka Kannada
Thursday, May 09 2024
ಬೆಂಗಳೂರು ನಗರ

ಬೆಂಗಳೂರು: ಪತ್ರಕರ್ತರಿಗೆ ಉಚಿತ ಟ್ಯಾಬ್ ನೀಡಲು ಅರ್ಜಿ ಆಹ್ವಾನ

Bengaluru: Applications invited to provide free tabs to journalists
Photo Credit : Freepik

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ 2022 -23ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಟ್ಯಾಬ್‍ಗಳನ್ನು ನೀಡಲು ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಪತ್ರಿಕೆಯು ನಿರಂತರವಾಗಿ ಪ್ರಕಟಗೊಳ್ಳುತ್ತಿದ್ದು, ಪತ್ರಿಕೆ ಮೇಲಾಗಲಿ ಹಾಗೂ ಸಂಪಾದಕರ ಮೇಲಾಗಲಿ ಯಾವುದೇ ರೀತಿಯ ಕ್ರಿಮಿನಲ್ ಅಪರಾಧ ಮೊಕದ್ದಮೆಗಳು ಇರಬಾರದು.

ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿಂದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಪುನಃ ಅರ್ಜಿ ಸಲ್ಲಿಸುವಂತಿಲ್ಲ. ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ.

ಅಭ್ಯರ್ಥಿಗಳು ಸ್ವಯಂ ಅರ್ಜಿಯೊಂದಿಗೆ 10 ವರ್ಷ ಸೇವಾ ಅನುಭವ, ಜಾತಿ ಪ್ರಮಾಣ ಪತ್ರ, ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಪಡೆದ ಸೇವಾ ದೃಢೀಕರಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆ ಲಗತ್ತಿಸಿ ಅಕಾಡೆಮಿಯ ಇಮೇಲ್ ವಿಳಾಸ karnatakamediaacademy@gmail.com ಗೆ ಸಲ್ಲಿಸಬೇಕು ಅಥವಾ ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಅಂಚೆ ಮೂಲಕ ನವೆಂಬರ್ 10, 2022 ರೊಳಗಾಗಿ ಸಲ್ಲಿಸಬಹುದೆಂದು ಅಕಾಡೆಮಿ ಕಾರ್ಯದರ್ಶಿ ಸಿ.ರೂಪಾ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು