News Karnataka Kannada
Monday, May 13 2024
ಬೆಂಗಳೂರು ನಗರ

ಬೆಂಗಳೂರು: ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್‌ ಸೇರ್ಪಡೆ

Bengaluru: Baburao Chinchansur joins Congress
Photo Credit : By Author

ಬೆಂಗಳೂರು : ಚುನಾವಣೆ ಘೋಷಣೆಗೂ ಮುನ್ನ ಪಕ್ಷಾಂತರ ಪರ್ವ ಶುರುವಾಗಿದ್ದು, ಕಲಬುರಗಿ ಜಿಲ್ಲೆಯ ಪ್ರಭಾವಿ ನಾಯಕ,ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್‌ಗಡ ಜಿಗಿದಿದ್ದಾರೆ. ಸೋಮವಾರ ರಾತ್ರಿ ವಿಧಾನ ಪರಿಷತ್‌ ಸ್ಥಾನಕ್ಕೂ ರಾಜೀನಾಮೆ ನೀಡರುವ ಚಿಂಚನಸೂರ್‌ ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ. ಖರ್ಗೆ ಕುಟುಂಬದ ಪ್ರಭಾವ ಇರುವ ಗುರುಮಿಠಕಲ್‌ ಕ್ಷೇತ್ರದಲ್ಲಿ ಸಾಕಷ್ಟು ಹಿಡಿತ ಹೊಂದಿದ್ದ ಹಿಂದುಳಿದ ಕೋಲಿ ಸಮುದಾಯಕ್ಕೆ ಸೇರಿದ ಚಿಂಚನಸೂರ್‌ ರಾಜೀನಾಮೆ ಬಿಜೆಪಿಗಾದ ಹಿನ್ನಡೆ ಎನ್ನಲಾಗಿದೆ.

ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು. ಆದರೆ ಬಿಜೆಪಿ ವರಿಷ್ಠರು ಅವರಿಗೆ ಟಿಕೆಟ್‌ ನಿರಾಕರಿಸಿದ್ದರು. ಈ ಕಾರಣಕ್ಕೆ ಚಿಂಚನಸೂರ್‌ ಪಕ್ಷ ತೊರೆದಿದ್ದಾರೆ. ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗದು ಎಂದು ಬಿಜೆಪಿ ನಾಯಕರು ತಿಳಿಸಿದ್ದರು. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಅಂತೆಯೇ ಬಿಜೆಪಿಗೂ ರಾಜೀನಾಮೆ ನೀಡಿದ್ದಾರೆ.

ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರೂ ಆಗಿರುವ ಚಿಂಚನಸೂರ್, 2019ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ. ಗುರುಮಿಠಕಲ್‌ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಚಿಂಚನಸೂರ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 2018ರ ವಿಧಾನಸಭ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಸೋತಿದ್ದ ಅವರು ಇದೀಗ ಮತ್ತೆ ‘ಕೈ’ ಪಕ್ಷದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವಲ್ಲಿ ಚಿಂಚನಸೂರ್ ಪ್ರಮುಖ ಪಾತ್ರ ವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು