News Karnataka Kannada
Saturday, May 04 2024
ಬೆಂಗಳೂರು ನಗರ

ಮಂಗಳವಾರ ಬೆಂಗಳೂರು ಬಂದ್​ಗೆ ಕರೆ: ಹಲವು ಸಂಘಟನೆಗಳಿಂದ ಬೆಂಬಲ

Bengaluru bandh call on Tuesday: Support from several organisations
Photo Credit : News Kannada

ಬೆಂಗಳೂರು: ಕಾವೇರಿ ಸಮಸ್ಯೆ ಮತ್ತೆ ಭುಗಿಲೆದ್ದಿದ್ದು, ಸುಪ್ರೀಂಕೋರ್ಟ್ ಆದೇಶದನ್ವಯ ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರು ಹರಿಯ ಬಿಡಬೇಕಿದೆ. ಈ ಬಗ್ಗೆ ಸ್ಪಷ್ಟ ನಿಲುವಿಗೆ ಸರ್ಕಾರ ಇನ್ನಷ್ಟೆ ಬರಬೇಕಿದೆ. ಇದರ ನಡುವೆ ರೈತರು, ಕನ್ನಡ ಪರ ಸಂಘಟನೆಗಳು ಇನ್ನಿತರೆ ಕೆಲವು ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು ಮಂಗಳವಾರ (ಸೆಪ್ಟೆಂಬರ್ 24) ಬಂದ್​ಗೆ ಕರೆ ನೀಡಿವೆ. ಬಂದ್​ಗೆ ಹಲವು ಸಂಘ-ಸಂಸ್ಥೆಗಳು ಬೆಂಬಲ ಘೋಷಿಸಿವೆ.

ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದ್ದು, ಬಂದ್​ಗೆ ಆಟೋ-ಟ್ಯಾಕ್ಸಿ, ಚಾಲಕರು, ಐಟಿ-ಬಿಟಿ ಒಕ್ಕೂಟ ಇನ್ನೂ ಹಲವಾರು ಸಂಘಟನೆಗಳು ಬೆಂಬಲ ನೀಡಿವೆ. ಇದರ ನಡುವೆ ಕನ್ನಡ ಕಿರುತೆರೆ ವಲಯವೂ ಸಹ ಮಂಗಳವಾರದ ಬೆಂಗಳೂರು ಬಂದ್​ಗೆ ಬೆಂಬಲ ನೀಡಿದೆ. ಅಲ್ಲದೆ ಮಂಗಳವಾರದಂದು ಕಿರುತೆರೆಗೆ ಸಂಬಂಧಿಸಿದ ಯಾವುದೇ ಚಿತ್ರೀಕರಣ ನಡೆಯುವುದಿಲ್ಲ ಎಂದಿದ್ದಾರೆ ಸಂಘದ ಅಧ್ಯಕ್ಷ ಗಣೇಶ್ ರಾವ್ ಕೇಸರ್ಕರ್ ಹೇಳಿದ್ದಾರೆ.

ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ಬಂದ್ ಮಾಡುವ ಜೊತೆಗೆ ಬಂದ್ ದಿನದಂದು ನಿಗದಿ ಪಡಿಸಿದ ಸ್ಥಳಕ್ಕೆ ಹಾಜರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಹ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಂಘಟನೆ ತನ್ನ ಸದಸ್ಯರು ಹಾಗೂ ಪದಾಧಿಕಾರಿಗಳ ಬಳಿ ಮನವಿ ಮಾಡಿದೆ.

ಇನ್ನು ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ನೇತೃತ್ವದಲ್ಲಿ ಈ ಬೆಂಗಳೂರು ಬಂದ್ ನಡೆಯುತ್ತಿದೆ. ಆಟೋ-ಟ್ಯಾಕ್ಸಿ, ಖಾಸಗಿ ಬಸ್, ಲಾರಿ, ಕಾರ್ಮಿಕ ಸಂಘಟನೆ, ಐಟಿ-ಬಿಟಿ, ಹೋಟೆಲ್-ಕಾಂಡಿಮೆಂಟ್ಸ್, ಇನ್ನೂ ಹಲವು ಸಂಘಟನೆಗಳು ಬೆಂಬಲ ನೀಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು