News Karnataka Kannada
Monday, May 06 2024
ಬೆಂಗಳೂರು ನಗರ

ಬೆಂಗಳೂರು: ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಬಸವರಾಜ ಬೊಮ್ಮಾಯಿ

Bommai
Photo Credit : Facebook

ಬೆಂಗಳೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆ ಮಲ್ಲೇಶ್ವರಂ ಸರ್ಕಾರಿ ಕಾಲೇಜು ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣದ ವೇಳೆ ಸಚಿವ ಅಶ್ವಥ್ ನಾರಾಯಣ್ ಉಪಸ್ಥಿತರಿದ್ದರು. ಗಾಯಕಿ ಮಂಗ್ಲಿ ಮತ್ತು ಗಾಯಕರ ತಂಡದಿಂದ ದೇಶಭಕ್ತಿ ಗೀತೆಗಳನ್ನು ಹಾಡಲಾಯಿತು.

ಧ್ವಜಾರೋಹಣದ ಬಳಿಕ ಮಾತಾಡಿದ ಸಿಎಂ, ದೇಶದ ಸ್ವಾತಂತ್ರ್ಯವನ್ನು ಸಂಭ್ರಮಿಸುವ ಕಾಲ ಇದು. ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟವರನ್ನು ನೆನೆಯಬೇಕಾದ ದಿನ. 1824ರಲ್ಲಿ ಕರ್ನಾಟಕದಲ್ಲೇ ಸ್ವಾತಂತ್ರ್ಯದ ಕಿಚ್ಚು ಮೊಳಗಿತ್ತು ಎಂದು ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರನ್ನು ಸ್ಮರಿಸಿದರು. ಹರ್ ಘರ್ ತಿರಂಗವನ್ನು ಕೊಂಡಾಡಿದ ಸಿಎಂ, ಕೊರೊನಾದಿಂದ ದೇಶವನ್ನು ಕಾಪಾಡಿದವರು ಮೋದಿ ಎಂದು ಶ್ಲಾಘಿಸಿದರು.

ಬಳಿಕ ಅಶ್ವಥ್ ನಾರಾಯಣ್ ಮಾತಾಡಿ, ಇವತ್ತು ದೇಶದಲ್ಲಿ ದೊಡ್ಡ ಸಂಚಲನವಾಗುತ್ತಿದೆ. ಸ್ವಾತಂತ್ರ್ಯ ವೀರರ ಕನಸು ನನಸು ಮಾಡುವ ಸುದಿನ ಎಂದರು. 2 ವರ್ಷ ಕೋವಿಡ್ ಕಾರಣದಿಂದ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಹೊಸ ಮೆರುಗು ದೊರಕಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು