ಬೆಂಗಳೂರು: ಬಿಜೆಪಿ ಸರ್ಕಾರ ಮೂರು ವರ್ಷದಲ್ಲಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿದ್ದನ್ನು ಬಿಟ್ಟರೆ, ಜನರ ಕಷ್ಟಕ್ಕೆ ಸ್ಪಂಧಿಸುವ ಕಾರ್ಯ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಇದೇ ವೇಳೆ ಅವರು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದು, ಬಡವರ, ರೈತರ, ಯುವಕರ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರವನ್ನು ಕಿತ್ತೊಗೆಯಬೇಕಾಗಿದೆ ಎಂದರು.
ಇನ್ನೂ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದರಿಂದ ರಾಜ್ಯದ ಜನತೆಗೆ ಹೆಮ್ಮೆಯಾಗಿದೆ. ಪಕ್ಷದ ಕಾರ್ಯಕರ್ತರಂತೂ ಸಂತಸಗೊಂಡಿದ್ದಾರೆ ಅಂತ ತಿಳಿಸಿದರು.