ಬೆಂಗಳೂರು: ದೀಪಾವಳಿ ಹಬ್ಬದ ನಾಲ್ಕನೇ ದಿನವಾದ ಬಲಿಪಾಡ್ಯಮಿಯನ್ನು ಕರ್ನಾಟಕ ಬಿಜೆಪಿ ನಾಯಕರು ತಮ್ಮ ತಮ್ಮ ನಿವಾಸಗಳಲ್ಲಿ ಬುಧವಾರ ಗೋಪೂಜೆ ಮಾಡುವ ಮೂಲಕ ಆಚರಿಸಿದರು.
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೋ (ಹಸು) ಪೂಜೆ ನೆರವೇರಿಸಿದರು.
ಯಡಿಯೂರಪ್ಪ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಗಿರ್ ತಳಿಯ ಎರಡು ಹಸುಗಳನ್ನು ಸಾಕುತ್ತಿದ್ದಾರೆ. ಅವರು ಸಿಎಂ ಆಗಿದ್ದಾಗ ಹಸುಗಳನ್ನು ಅವರಿಗೆ ಉಡುಗೊರೆಯಾಗಿ ನೀಡಲಾಯಿತು, ಮತ್ತು ಅಂದಿನಿಂದ ಪ್ರತಿದಿನ ಕರುವಿನೊಂದಿಗೆ ಸಮಯ ಕಳೆಯುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಯಡಿಯೂರಪ್ಪ ಅವರು ಹಸುಗಳಿಗೆ ದವಸ ಧಾನ್ಯಗಳನ್ನು ಉಣಬಡಿಸಿ ಪೂಜಿಸಿದ್ದಾರೆ.
ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ಗುಡ್ಡೆಕೊಪ್ಪ ಗ್ರಾಮದ ತಮ್ಮ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಅವರು ಹಸುಗಳಿಗೆ ಆರತಿ ಮಾಡಿ ಅವುಗಳಿಗೆ ಧಾನ್ಯಗಳನ್ನು ತಿನ್ನಿಸಿದರು.