ಬೆಂಗಳೂರು: ಕರ್ನಾಟಕ “ಟೆಂಡರ್ಗಾಗಿ ಲಂಚ” ಹಗರಣದ ಪ್ರಮುಖ ಆರೋಪಿ ಮತ್ತು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಗುರುವಾರ ಲೋಕಾಯುಕ್ತ ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದಾರೆ. ವಿರೂಪಾಕ್ಷಪ್ಪ ಅವರು ತನಿಖಾ ಸಂಸ್ಥೆಗೆ ಹಾಜರಾಗಲು ಕರ್ನಾಟಕ ಹೈಕೋರ್ಟ್ 48 ಗಂಟೆಗಳ ಗಡುವು ನೀಡಿದ್ದು, ತನಿಖಾಧಿಕಾರಿ ಆಂಟನಿ ಜಾನ್ ಅವರ ಮುಂದೆ ಹಾಜರಾಗಿದ್ದಾರೆ.
ಜಾನ್ ಈಗಾಗಲೇ ತನಿಖೆ ಆರಂಭಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಶಾಸಕರ ಪುತ್ರ ಹಾಗೂ ಸರ್ಕಾರಿ ಅಧಿಕಾರಿ ಪ್ರಶಾಂತ್ ಮಾಡಾಳ್ ಕಚೇರಿಯಲ್ಲಿ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಅಧ್ಯಕ್ಷರಾಗಿದ್ದತಂದೆ ವಿರೂಪಾಕ್ಷಪ್ಪ ಅವರ ಪರವಾಗಿ ಪ್ರಶಾಂತ್ ಹಣ ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ಬಿಜೆಪಿ ಶಾಸಕನಿಗೆ ಮಧ್ಯಂತರ ಜಾಮೀನು ನೀಡಿತ್ತು. ಶಾಸಕರಿಗೆ ಜಾಮೀನು ನೀಡಿದ ನಂತರ ನಡೆದ ಸಂಭ್ರಮಾಚರಣೆ ಚರ್ಚೆಗೆ ಗ್ರಾಸವಾಗಿದ್ದು, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ.