News Karnataka Kannada
Wednesday, May 08 2024
ಬೆಂಗಳೂರು ನಗರ

ಬೆಂಗಳೂರು: ಲಂಚ ಹಗರಣ ಆರೋಪಿ ಮಾಡಾಳ್‌ ಲೋಕಾಯುಕ್ತ ತನಿಖೆಗೆ ಹಾಜರ್‌

Bengaluru bribery case accused Madal appears before Lokayukta probe
Photo Credit : IANS

ಬೆಂಗಳೂರು: ಕರ್ನಾಟಕ “ಟೆಂಡರ್‌ಗಾಗಿ ಲಂಚ” ಹಗರಣದ ಪ್ರಮುಖ ಆರೋಪಿ ಮತ್ತು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಗುರುವಾರ ಲೋಕಾಯುಕ್ತ ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದಾರೆ. ವಿರೂಪಾಕ್ಷಪ್ಪ ಅವರು ತನಿಖಾ ಸಂಸ್ಥೆಗೆ ಹಾಜರಾಗಲು ಕರ್ನಾಟಕ ಹೈಕೋರ್ಟ್ 48 ಗಂಟೆಗಳ ಗಡುವು ನೀಡಿದ್ದು, ತನಿಖಾಧಿಕಾರಿ ಆಂಟನಿ ಜಾನ್ ಅವರ ಮುಂದೆ ಹಾಜರಾಗಿದ್ದಾರೆ.

ಜಾನ್ ಈಗಾಗಲೇ ತನಿಖೆ ಆರಂಭಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಶಾಸಕರ ಪುತ್ರ ಹಾಗೂ ಸರ್ಕಾರಿ ಅಧಿಕಾರಿ ಪ್ರಶಾಂತ್‌ ಮಾಡಾಳ್‌ ಕಚೇರಿಯಲ್ಲಿ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು.

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದತಂದೆ ವಿರೂಪಾಕ್ಷಪ್ಪ ಅವರ ಪರವಾಗಿ ಪ್ರಶಾಂತ್‌ ಹಣ ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ಬಿಜೆಪಿ ಶಾಸಕನಿಗೆ ಮಧ್ಯಂತರ ಜಾಮೀನು ನೀಡಿತ್ತು. ಶಾಸಕರಿಗೆ ಜಾಮೀನು ನೀಡಿದ ನಂತರ ನಡೆದ ಸಂಭ್ರಮಾಚರಣೆ ಚರ್ಚೆಗೆ ಗ್ರಾಸವಾಗಿದ್ದು, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು