ಬೆಂಗಳೂರು: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏ.2, ಏ. 4, ಏ.17, ಏ.26 ಹಾಗೂ ಮೇ 21 ರಂದು ನಡೆಯಲಿರುವ ಐಪಿಎಲ್-2023 ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಗೆ ಆಗಮಿಸುವ ವೀಕ್ಷಕರ ಅನುಕೂಲಕ್ಕಾಗಿ ರಾತ್ರಿ 11 ಗಂಟೆಯ ನಂತರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ರಾತ್ರಿ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಹಿತಿ ನೀಡಿದ್ದು, ಎಂ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ಬಸ್ ನಿಲ್ದಾಣ ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಕೆಂಗೇರಿ ಕೆ.ಹೆಚ್.ಬಿ. ಕ್ವಾಟ್ರಸ್, ಜನಪ್ರಿಯ ಟೌನಷಿಪ್, ನೆಲಮಂಗಲ, ಯಲಹಂಕ 5ನೇ ಹಂತ, ಆರ್.ಕೆ.ಹೆಗಡೆ ನಗರ-ಯಲಹಂಕ, ಬಾಗಲೂರು ಹೊಸಕೋಟೆ ಮಾರ್ಗಗಳಲ್ಲಿ ಬಸ್ ಸೇವೆ ಇರಲಿದ್ದು, ಇದರಿಂದ ಕ್ರಿಕೆಟ್ ಪಂದ್ಯಾವಳಿಗೆ ತೆರಳುವ ಮತ್ತು ಕ್ರಿಕೆಟ್ ಪಂದ್ಯಾವಳಿ ಮುಗಿಸಿಕೊಂಡು ತಮ್ಮ ಮನೆಗಳಿಗೆ ತೆರಳುವವರಿಗೆ ಅನುಕೂಲವಾಗಲಿದೆ.