ಬೆಂಗಳೂರು: ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ಎಲ್ಲವನ್ನು ಸಮಗ್ರವಾಗಿ ನಾವು ನೋಡುತ್ತಿದ್ದೇವೆ.
ರೇಣುಕಾಚಾರ್ಯ ಜೊತೆಗೆ ಮಾತಾಡಿ ಮುಂದಿನ ನಿರ್ಧಾರ ಮಾಡುತ್ತೇವೆ. ನಂತರ ಅವರ ತಂದೆ ಜೊತೆಗೆ ಮಾತಾಡುತ್ತೇವೆ. ಅದರ ಹಿನ್ನೆಲೆ ಅವರಿಗೆ ಗೊತ್ತಿರುತ್ತದೆ. ಅವರ ತಂದೆ ಅನಿಸಿಕೆ ತಿಳಿದುಕೊಳ್ಳುತ್ತೇವೆ.
ಅವರು ಏನ್ ಹೇಳುತ್ತಾರೆ ಅದರ ಪ್ರಕಾರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಇನ್ನೂ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವ ಪತ್ತೆಯಾದ ನಂತರ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಅದರಂತೆ ಸಿಸಿಟಿವಿಗಳ ಪರಿಶೀಲನೆ ವೇಳೆ ಚಂದ್ರಶೇಖರ್ ಓಡಾಟದ ದೃಶ್ಯಾವಳಿಗಳು ಸೆರೆಯಾಗಿವೆ. ಇದನ್ನು ಆಧರಿಸಿ ಕಿರಣ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾಣೆ ಆರಂಭಿಸಿದ್ದಾರೆ. ಕಾಲುವೆಗೆ ಬೀಳುವ ದಿನದಂದು ಚಂದ್ರಶೇಖರ್, ವಿನಯ್ ಗುರುಜಿ ಆಶ್ರಮಕ್ಕೆ ಹೋಗಿರುವುದು ತಿಳಿದುಬಂದಿದೆ.