ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಧನ ಹೊಂದಿದ ತಮ್ಮ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರ ನಿವಾಸಕ್ಕೆ ಭೇಟಿ ನೀಡಿ ಮೃತರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಅಸ್ವಸ್ಥಗೊಂಡ ಗುರುಲಿಂಗ ಸ್ವಾಮಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಗುರುಲಿಂಗ ಸ್ವಾಮಿ ಹೊಳಿಮಠ (45) ವಿವಿಧ ಪತ್ರಿಕೆ, ಟಿವಿ ಚಾನೆಲ್ಗಳಲ್ಲಿ ಕಾರ್ಯನಿರ್ವಹಿಸಿದ್ದರು.
ಗುರುಲಿಂಗಸ್ವಾಮಿ ಹೋಳಿಮಠ್ ರವರಿಗೆ ಇಬ್ಬರು ಪುತ್ರಿಯರಿದ್ದರು.