ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ತಡೆ ನೀಡಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದ್ದು ಪರೀಕ್ಷೆ ನಡೆಸುವ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ.
ಆದರೆ ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತೆ ಇಲ್ಲವೆಂಬ ನಿರ್ಬಂಧ ವಿಧಿಸಿದೆ. ಮಾರ್ಚ್ 27ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದೆ. ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂಬ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ, ಪೋಷಕರು ಶಾಲಾ ಆಡಳಿತ ಮಂಡಳಿಗಳಲ್ಲಿ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.
ಫಲಿತಾಂಶವನ್ನು ನೇರವಾಗಿ ಶಾಲೆಗಳಿಗೆ ತಲುಪಿಸುವಂತೆಯೂ ಸೂಚಿಸಿದೆ.