ಬೆಂಗಳೂರು: ಸಮಾಜದಲ್ಲಿ ಹೇಗೆ ಇರಬೇಕು ಎಂಬುದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಜನರೇ ಅವರನ್ನು ಬದಲಿಸುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಮತ್ತು ವೀರ ಸಾವರ್ಕರ್ ಕುರಿತು ಮಾತನಾಡುವುದು ಕಾಂಗ್ರೆಸ್ ನಾಯಕರ ದೌರ್ಬಲ್ಯ. ಇದು ಅವರ ಅಜ್ಞಾನವನ್ನು ತಿಳಿಸುತ್ತದೆ. ಕಾಂಗ್ರೆಸ್ ಕಾರ್ಯಕರ್ತರೇ ಅವರ ನಾಯಕರ ಮೇಲೆ ಮುಗಿಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಸುಧಾಕರ್, ಈ ವಿಚಾರವನ್ನು ಅಲ್ಲಿಯೇ ಬಿಡಬೇಕು. ರಾಜಕಾರಣಕ್ಕಾಗಿ ಮುಂದುವರಿಸಿಕೊಂಡು ಹೋಗುವುದು ಸರಿಯಲ್ಲ ಎಂದು ಹೇಳಿದ್ದಾರೆ.