News Karnataka Kannada
Monday, May 06 2024
ಬೆಂಗಳೂರು ನಗರ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಗಣೇಶೋತ್ಸವ ನಿರಂತರವಾಗಿ ನಡೆಯುತ್ತದೆ- ಬಿ.ಸಿ.ನಾಗೇಶ್‌

State government will collect details of Arabic schools says education minister
Photo Credit :

ಬೆಂಗಳೂರು: ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಇಂದಿನದ್ದು ಅಲ್ಲ, ಈ ಹಿಂದಿನಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ. ಆ ಪದ್ಧತಿಯನ್ನು ನಿಲ್ಲಿಸೋದಿಲ್ಲ. ಹೊಸ ಬೇಡಿಕೆ ಇಡುವ ಧಾರ್ಮಿಕ ಆಚರಣೆಗೆ ಅನುಮತಿಯನ್ನು ನೀಡೋದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವುದಾದರೆ ಬೇರೆ ಧರ್ಮಗಳ ಧಾರ್ಮಿಕ ಆಚರಣೆಗೂ ಅವಕಾಶ ನೀಡಬೇಕೆಂದು ಕೆಲ ಸಂಘಟನೆಗಳು ಆಗ್ರಹಿಸಿರುವ ಹಿನ್ನೆಲೆಯಲ್ಲಿ ಅವರು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.

ಈ ಹಬ್ಬದ ಆಚರಣೆಯನ್ನು ಬಾಲಗಂಗಾಧರ ತಿಲಕ್ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರನ್ನು ಒಗ್ಗೂಡಿಸುವ ಸಲುವಾಗಿ ಆರಂಭಿಸಲಾಗಿದ್ದಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ಸಾಮೂಹಿಕವಾಗಿ ಪೂಜಿಸುವ ಪದ್ಧತಿ ನಡೆದುಕೊಂಡು ಬಂದಿದೆ. ಇದರ ಫ‌ಲವಾಗಿಯೇ ಹಿಂದೂಗಳು ಮಾತ್ರವಲ್ಲ ಬೇರೆ ಬೇರೆ ಧರ್ಮೀಯರೂ ಒಟ್ಟಾಗಿ ಸೇರಿ ಗಣೇಶೋತ್ಸವ ಆಚರಿಸುವ ಪದ್ಧತಿಯಿದೆ. ಅದನ್ನು ಮುಂದುವರಿಸಿಕೊಂಡು ಹೋಗಲು ಯಾವುದೇ ಸಮಸ್ಯೆ ಇಲ್ಲ ಎಂದರು.

ಬಿಜೆಪಿ ಅಧಿಕಾರಕ್ಕೆ ಬಂದ ಮೇಲಾಗಲಿ, ನಾನು ಶಿಕ್ಷಣ ಸಚಿವನಾದ ಮೇಲಾಗಲಿ ಜಾರಿ ಮಾಡಿದ್ದಲ್ಲ. ಈ ದೇಶದಲ್ಲಿ ಪ್ರಾಚೀನ ಕಾಲದಿಂದಲೂ ಅನೇಕ ಪದ್ಧತಿ, ಆಚರಣೆಗಳು ನಡೆದು ಬಂದಿವೆ. ಮುಂದೆಯೂ ನಡೆದುಕೊಂಡು ಹೋಗುತ್ತವೆ. ಈಗ ಯಾರೋ ಕೇಳುತ್ತಿದ್ದಾರೆ ಎಂದು ಆಚರಣೆ ಬಿಡೋಕೆ ಆಗಲ್ಲ. ನಾವು ಅದನ್ನು ಆರಂಭಿಸಿಯೂ ಇಲ್ಲ, ಮುಕ್ತಾಯ ಮಾಡುವರೂ ಅಲ್ಲ. ಅದು ನಿರಂತರವಾಗಿ ನಡೆಯುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು