News Karnataka Kannada
Sunday, May 05 2024
ಬೆಂಗಳೂರು ನಗರ

ಬೆಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆಗೆ ಮೂಲ ಕಾರಣ ಹಲಾಲ್‌ ಕಟ್‌ ಮತ್ತು ಜಟ್ಕಾ ಕಟ್‌ ವಿವಾದ

Complaint filed against Araga Gyanendra for comments on Kharge's complexion
Photo Credit : Twitter

ಬೆಂಗಳೂರು: ಪ್ರವೀಣ್‌ ನೆಟ್ಟಾರು ಅವನ್ನು ಕೊಲೆ ಮಾಡಿದವರು ಕೇರಳದವರಲ್ಲ. ಆದರೆ ಕೇರಳದೊಂದಿಗೆ ನಂಟು ಹೊಂದಿರುವ ಒಂದು ಸಮುದಾಯಕ್ಕೆ ಸೇರಿದ ಸ್ಥಳೀಯ ಯುವಕರೇ ನಡೆಸಿರುವ ಕೃತ್ಯವಿದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪ್ರವೀಣ್‌ ನೆಟ್ಟಾರು ಹತ್ಯೆಗೆ ಮೂಲ ಕಾರಣ ಹಲಾಲ್‌ ಕಟ್‌ ಮತ್ತು ಜಟ್ಕಾ ಕಟ್‌ ವಿವಾದ. ಜತೆಗೆ ಕೆಲವು ದಿನಗಳ ಹಿಂದೆ ನಡೆದಿದ್ದ ಮಸೂದ್‌ ಕೊಲೆಗೆ ಪ್ರತೀಕಾರವಾಗಿಯೂ ಈ ಹತ್ಯೆ ಮಾಡಲಾಗಿದೆ ಎಂದು ತನಿಖಾ ಸಂಸ್ಥೆಗಳ ಮಾಹಿತಿಯಿಂದ ಬೆಳಕಿಗೆ ಬಂದಿದೆ. ಕೇರಳ ನೋಂದಣಿಯ ಬೈಕನ್ನು ಬಳಸುವ ಮೂಲಕ ಹಂತಕರು ಕೇರಳದವರು ಎನ್ನುವಂತೆ ಬಿಂಬಿಸಿ ಪ್ರಕರಣದ ದಿಕ್ಕು ತಪ್ಪಿಸಲೆತ್ನಿಸಿದ ಸಾಧ್ಯತೆ ಇದೆ. ಕೃತ್ಯದ ಬಳಿಕ ಆರೋಪಿಗಳು ಕೇರಳಕ್ಕೆ ತೆರಳಿರುವುದು ದೃಢಪಟ್ಟಿದೆ.

ಪ್ರಮುಖ ಆರೋಪಿಗಳ ಪೈಕಿ ಓರ್ವ ಸುಳ್ಯದವ ಇನ್ನೋರ್ವ ಬೆಳ್ಳಾರೆ ಮೂಲದವ ಎಂಬ ಮಾಹಿತಿ ಇದೆ. ಹಂತಕರು ತಮ್ಮ ಮೊಬೈಲ್‌ ಫೋನ್‌ಗಳನ್ನು ಮನೆಯಲ್ಲೇ ಬಿಟ್ಟು ಮನೆಗೆ ಬೀಗ ಹಾಕಿ ಊರೂರು ಅಲೆಯುತ್ತಿರುವುದು ತಿಳಿದಿದೆ. ಎರಡು ಮೂರು ದಿನಗಳಲ್ಲಿ ಆರೋಪಿಗಳ ಬಂಧನವಾಗಲಿದೆ ಎನ್ನುವ ಸುಳಿವನ್ನು ಸಚಿವರು ನೀಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು