News Karnataka Kannada
Friday, May 03 2024
ಬೆಂಗಳೂರು ನಗರ

ಬೆಂಗಳೂರು: ರಸ್ತೆಗಳಲ್ಲಿ ಗುಂಡಿ, ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

Hc directs NHAI to conduct quality check on potholes
Photo Credit : Pixabay

ಬೆಂಗಳೂರು: ಬೆಂಗಳೂರಿನಲ್ಲಿನ ಗುಂಡಿಗಳ ಹಾವಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ನ್ಯಾಯಾಲಯ ನೀಡಿದ ಆದೇಶಗಳನ್ನು ಪಾಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಫಲವಾಗಿದೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಲೆ ನೇತೃತ್ವದ ವಿಭಾಗೀಯ ಪೀಠವು ರಸ್ತೆಗುಂಡಿಗಳ ಹಾವಳಿಗೆ ಸಂಬಂಧಿಸಿದಂತೆ ವಿಜಯ್ ಮೆನನ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸುವಾಗ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿತು.

ಗುಂಡಿಗಳಿಂದ ತುಂಬಿದ ರಸ್ತೆಗಳಿಂದಾಗಿ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ ಮತ್ತು ಗುಂಡಿಗಳನ್ನು ತುಂಬಲು ಬಿಬಿಎಂಪಿ ಸೂಕ್ತ ತಂತ್ರಜ್ಞಾನವನ್ನು ಬಳಸಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ಗುಂಡಿಗಳನ್ನು ಮುಚ್ಚುವ ವಿಷಯದಲ್ಲಿ ಬಿಬಿಎಂಪಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಯಾವ ಕ್ರಮವನ್ನು ಪ್ರಾರಂಭಿಸಲಾಗಿದೆ ಎಂಬುದರ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ನಿರ್ದೇಶನ ನೀಡಿತು.

ಬಿಬಿಎಂಪಿ ಪರ ವಕೀಲರು ಮಧ್ಯಪ್ರವೇಶಿಸಿ, ಬೆಂಗಳೂರಿನಲ್ಲಿನ ಗುಂಡಿಗಳನ್ನು ತುಂಬಿಸುವ ಬಗ್ಗೆ ವಿಸ್ತೃತ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸಿದರು. ಈ ವಿಷಯದ ಬಗ್ಗೆ ವಾದಿಸಲು ವಕೀಲರು ಸಮಯವನ್ನು ಕೋರಿದ್ದರು.

ನ್ಯಾಯಾಲಯವು ವಿಚಾರಣೆಯನ್ನು ನೀಡಲು ಒಪ್ಪಿಕೊಂಡಿತು ಮತ್ತು ಪ್ರಕರಣವನ್ನು ನವೆಂಬರ್ ೨ ಕ್ಕೆ ಮುಂದೂಡಿತು.

ಸಿಲಿಕಾನ್ ವ್ಯಾಲಿ ಬೆಂಗಳೂರನ್ನು ಗುಂಡಿಗಳ ಕಣಿವೆಯಾಗಿ ಬಿಜೆಪಿ ಪರಿವರ್ತಿಸಿದೆ ಎಂದು ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಟೀಕಿಸಿವೆ.

ಆಡಳಿತಾರೂಢ ಬಿಜೆಪಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು (ಜಿಮ್) ಗುಂಡಿಗಳಿಂದ ಕೂಡಿದ ರಸ್ತೆಗಳೊಂದಿಗೆ ಆಯೋಜಿಸುವಲ್ಲಿ ನಿರತವಾಗಿದೆ ಎಂದು ಅವರು ಛೀಮಾರಿ ಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು