News Karnataka Kannada
Saturday, May 11 2024
ಬೆಂಗಳೂರು ನಗರ

ಬೆಂಗಳೂರು: ಒಂದೇ ದಿನ ಐದು ಪ್ರಕರಣಗಳ ವಿಚಾರಣೆ ಎದುರಿಸಿದ ಡಿ.ಕೆ. ಶಿವಕುಮಾರ್‌

Bengaluru: I have taken a break from Prajadhvani Yatra and attended it myself: DK Shivakumar Shivakumar
Photo Credit : News Kannada

ಬೆಂಗಳೂರು: ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳ ವಿಚಾರಣೆ ಗುರುವಾರ ಒಂದೇ ದಿನ ನಿಗದಿಯಾದ ಕಾರಣ ಪ್ರಜಾಧ್ವನಿ ಯಾತ್ರೆಗೆ ವಿರಾಮ ನೀಡಿ  ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಡಿ.ಕೆ. ಶಿವಕುಮಾರ್  ಹೇಳಿದರು.

ವಿವಿಧ ಪ್ರಕರಣ, ಒಂದೇ ದಿನ ವಿಚಾರಣೆ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿಚಾರಣೆ ಸಮಯದಲ್ಲಿ ಮಾಡಿದ ಹೋರಾಟ, ರೈತ ವಿರೋಧಿ ಕಾನೂನು ವಿರುದ್ಧದ ಹೋರಾಟ, ಮೇಕೆದಾಟು ಪಾದಯಾತ್ರೆ ಸಮಯದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ, ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ಜತೆಗೆ ಆದಾಯ ತೆರಿಗೆ ಇಲಾಖೆ ಪ್ರಕರಣದ ವಿಚಾರಣೆ ಗುರುವಾರ ಸಿವಿಲ್ ಕೋರ್ಟ್ ನಲ್ಲಿ ನಡೆದಿದೆ ಎಂದು ಡಿ.ಕೆ. ಶಿವಕುಮಾರ್  ಸುದ್ದಿಗಾರರಿಗೆ ತಿಳಿಸಿದರು.

ಈ ಎಲ್ಲಾ ಪ್ರಕರಣಗಳ ವಿಚಾರಣೆ ಒಂದೇ ದಿನ ಇದ್ದ ಹಿನ್ನೆಲೆಯಲ್ಲಿ ಪ್ರಜಾಧ್ವನಿ ಯಾತ್ರೆಗೆ ವಿರಾಮ ನೀಡಿ  ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಜಾಮೀನು ಮಂಜೂರು: ಒಂದು ಪ್ರಕರಣದಲ್ಲಿ ಜಾಮೀನು ವಿಸ್ತರಣೆ ಮಾಡಿಕೊಳ್ಳಬೇಕಿತ್ತು. ಜಾಮೀನು ವಿಸ್ತರಣೆ ಆಗಿದೆ. ಉಳಿದ ಪ್ರಕರಣಗಳಲ್ಲಿ ನಾವು ಸಮಯಾವಕಾಶ ಕೇಳಿರುವ ಹಿನ್ನೆಲೆಯಲ್ಲಿ ವಿಚಾರಣೆ ಮೇ ತಿಂಗಳಿಗೆ ಮುಂದೂಡಿಕೆಯಾಗಿದೆ. ಆದಾಯ ತೆರಿಗೆ ಇಲಾಖೆ ಪ್ರಕರಣ ಕೂಡ ಮೇ ತಿಂಗಳಿಗೆ ಮುಂದೂಡಿಕೆಯಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು