ಬೆಂಗಳೂರು : ಮುಚ್ಚಿರುವ ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯದಿದ್ದಲ್ಲಿ ಧರಣಿ ಸತ್ಯಾಗ್ರಹ!

ಬೆಂಗಳೂರು : ಮುಚ್ಚಿರುವ ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯದಿದ್ದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಶಿವಾನಂದ ವೃತ್ತದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಗಳಿಗೆ ಬರುತ್ತಿರುವ ಜನರ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವುದು ಒಂದು ನೆಪ ಮಾತ್ರ.

ರಾಜ್ಯ ಬಿಜೆಪಿ ಸರ್ಕಾರ ದುರುದ್ದೇಶದಿಂದ ಕ್ಯಾಂಟೀನ್ ನ ಊಟ-ತಿಂಡಿಯ ಗುಣಮಟ್ಟವನ್ನು ಕೆಡಿಸುತ್ತಿದೆ. ಇದರ ಜೊತೆಗೆ ಕ್ಯಾಂಟೀನ್ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡದೆ ಸತಾಯಿಸುತ್ತಿದೆ.

ನಮ್ಮ ಸರ್ಕಾರ ಬೆಂಗಳೂರು ನಗರದ ಎಲ್ಲ 198 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸಿತ್ತು. ಅವುಗಳಲ್ಲಿ ಈಗ 40 ಕ್ಯಾಂಟಿನ್ ಗಳು ಮುಚ್ಚಿವೆ. ಬೆಂಗಳೂರು ನಗರವೂ ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿನ ಕ್ಯಾಂಟೀನ್ ಗಳನ್ನು ಕೂಡಾ ಒಂದೊಂದಾಗಿ ಮುಚ್ಚಲಾಗುತ್ತಿದೆ.

ರಾಜ್ಯದಲ್ಲಿ ಮುಚ್ಚಿರುವ ಇಂದಿರಾ ಕ್ಯಾಂಟೀನ್ ಗಳನ್ನು ತೆರೆದು ಗುಣಮಟ್ಟದ ಊಟ-ತಿಂಡಿ ನೀಡಬೇಕೆಂದು ಮುಖ್ಯಮಂತ್ರಿ ಯವರನ್ನು ಒತ್ತಾಯಿಸುತ್ತೇನೆ. ಇದಕ್ಕೆ ತಪ್ಪಿದ್ದಲ್ಲಿ ನಾನೇ ಬಂದು ಮುಚ್ಚಿರುವ ಇಂದಿರಾ ಕ್ಯಾಂಟೀನ್ ಗಳ ಮುಂದೆ ಧರಣಿ ಕೂರುತ್ತೇನೆ ಎಂದು ಸಿದ್ದು ಎಚ್ಚರಿಕೆ ನೀಡಿದ್ದಾರೆ.

Sneha Gowda

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

6 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

19 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

42 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

47 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

59 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

1 hour ago