ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 6 ರಂದು ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಕಾಂಗ್ರೆಸ್ ರಾಜ್ಯ ಘಟಕವು ಅರಮನೆ ಮೈದಾನದಲ್ಲಿ ನಾಗರಿಕ ಸ್ವಾಗತವನ್ನು ಆಯೋಜಿಸಲು ನಿರ್ಧರಿಸಿದೆ.
ಪಕ್ಷದ ನಾಯಕರ ಪ್ರಕಾರ, ಖರ್ಗೆ ಅವರನ್ನು ಮೆರವಣಿಗೆ ಮೂಲಕ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಕರೆತರಲಾಗುವುದು. ನಂತರ ಅರಮನೆ ಮೈದಾನದಲ್ಲಿ ನಾಗರಿಕ ಸ್ವಾಗತ ಕಾರ್ಯಕ್ರಮ ನಡೆಯಲಿದೆ.
“ಅವರು ಬೆಳಿಗ್ಗೆ 8 ಗಂಟೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅರಮನೆ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ನಾಗರಿಕ ಸ್ವಾಗತ ಸಮಾರಂಭ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕರು ಮಾಹಿತಿ ನೀಡಿದರು.
ನಾಗರಿಕ ಸ್ವಾಗತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಭಾಗವಹಿಸಲಿದ್ದಾರೆ.