News Karnataka Kannada
Sunday, May 19 2024
ಬೆಂಗಳೂರು ನಗರ

ಬೆಂಗಳೂರು: ಕೇವಲ 50 ರೂಪಾಯಿಗಾಗಿ ಸ್ನೇಹಿತನ ಹತ್ಯೆಗೈದ ಯುವಕ

Man murdered over girl's love affair
Photo Credit :

ಬೆಂಗಳೂರು: ಸ್ನೇಹಿತನ ಹತ್ಯೆಗೈದ ಯುವಕನೊಬ್ಬ ಪರಾರಿಯಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.  ಬಸವೇಶ್ವರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕುರುಬರ ಹಳ್ಳಿ ಸರ್ಕಲ್‌ ಬಳಿ ಈ ಘಟನೆ ನಡೆದಿದ್ದು, ಬಾಲ್ಯ ಸ್ನೇಹಿತರಾಗಿದ್ದ ಇವರುಗಳು ಈಗ ಬೇರೆ ಬೇರೆ ಕಡೆ ವಾಸಿಸುತ್ತಿದ್ದರೂ ಆಗಾಗ ಭೇಟಿಯಾಗುತ್ತಿದ್ದರು ಎನ್ನಲಾಗಿದೆ.

ಶಿವಮಾದು ಆಟೋ ಚಾಲಕನಾಗಿದ್ದರೆ, ಶಾಂತಕುಮಾರ್‌ ಝೋಮ್ಯಾಟೋ ಡೆಲಿವರಿ ಬಾಯ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಘಟನೆ ನಡೆದ ದಿನದಂದು ಭೇಟಿಯಾದ ಇಬ್ಬರು ಕಾರ್ಯ ನಿಮಿತ್ತ ಬ್ರೌಸಿಂಗ್‌ ಸೆಂಟರ್‌ ಗೆ ಬಂದಿದ್ದಾರೆ. ಈ ವೇಳೆ ಶಿವಮಾದು ಸ್ನೇಹಿತ ಶಾಂತಕುಮಾರ್‌ ಜೇಬಿನಿಂದ 50 ರೂಪಾಯಿ ತೆಗೆದುಕೊಂಡನೆನ್ನಲಾಗಿದ್ದು, ಈ ವಿಚಾರಕ್ಕೆ ದೊಡ್ಡ ಗಲಾಟೆಯೇ ನಡೆದು ಬಳಿಕ ಶಾಂತಕುಮಾರ್‌ ತನ್ನ ಬಳಿಯಿದ್ದ ಚಾಕುವಿನಿಂದ ಶಿವಮಾದುಗೆ ಇರಿದು ಪರಾರಿಯಾಗಿದ್ದಾರೆ. ಇದರ ಪರಿಣಾಮ ಆತ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.

ಸಿಸಿ ಟಿವಿ ದೃಶ್ಯಾವಳಿ ಪರಿಶೀಲಿಸಿ ಆರೋಪಿಯನ್ನು ಗುರುತಿಸಿರುವ ಬಸವೇಶ್ವರ ನಗರ ಠಾಣೆ ಪೊಲೀಸರು ಶಾಂತಕುಮಾರ್‌ ಬಂಧನಕ್ಕೆ ಬಲೆ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು