ಬೆಂಗಳೂರು, ಅ.22: ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.
ಆಂಧ್ರ ಪ್ರದೇಶದ ಹಿಂದೂಪುರ ನಿವಾಸಿ ಚಂದ್ರಶೇಖರ್(33) ಕೊಲೆಯಾದ ವ್ಯಕ್ತಿ. ಹಳೆ ಯಲಹಂಕದ ಕೊಂಡಪ್ಪ ಲೇಔಟ್ನಲ್ಲಿ ಮೂರು ಅಂತಸ್ತಿನ ಮನೆಯಿದ್ದು, ಒಂದು ಮನೆಯಲ್ಲಿ ಚಂದ್ರಶೇಖರ್ ದಂಪತಿ ವಾಸವಾಗಿದ್ದು, ಚಂದ್ರಶೇಖರ್ ನೇಯ್ಗೆ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ 8.45ರ ಸುಮಾರಿನಲ್ಲಿ ಮನೆಯ ಟೆರೆಸ್ನಲ್ಲಿ ಚಂದ್ರಶೇಖರ್ ಅವರ ಮೇಲೆ ಆರೋಪಿಗಳು ಹಲ್ಲೆ ನಡೆಸಿ ತಲೆ ಹಾಗೂ ಮರ್ಮಾಂಗಕ್ಕೆ ಹೊಡೆದು ಪರಾರಿಯಾಗಿದ್ದಾರೆ.
ಕುಟುಂಬದವರು ನೋಡಿ ತಕ್ಷಣ ಚಂದ್ರಶೇಖರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಯಲಹಂಕ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.