ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿರುವ ಶಾಸಕ, ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಅವರ ಸೋದರನ ಪುತ್ರ ಚಂದ್ರಶೇಖರ್ ಅವರ ಶವ ದಾವಣಗೆರೆ ಜಿಲ್ಲೆಯ ನದಿ ಕಾಲುವೆಯಲ್ಲಿ ಪತ್ತೆಯಾಗಿದೆ.
ನ್ಯಾಮತಿ ಬಳಿಯ ತುಂಗಾ ಭದ್ರಾ ನದಿ ಕಾಲುವೆಯಲ್ಲಿ ಸಿಕ್ಕ ಕಾರಿನ ಹಿಂದಿನ ಸೀಟಿನಲ್ಲಿ ಶವ ಪತ್ತೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು,ತನಿಖೆ ಆರಂಭಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.