News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ಸಿಬಿಎಸ್‌ಇ ಪಠ್ಯಪುಸ್ತಕದಲ್ಲಿನ ತಪ್ಪು ಮಾಹಿತಿಗೆ ಮೋಹನ್‌ ದಾಸರಿ ಖಂಡನೆ

Mohan
Photo Credit : Twitter

ಬೆಂಗಳೂರು: ಅತಿದೊಡ್ಡ ಅಣೆಕಟ್ಟೆಗಳಲ್ಲಿ ಒಂದಾದ ತುಂಗಭದ್ರಾ ನೀರಾವರಿ ಯೋಜನೆಯು ಆಂಧ್ರಪ್ರದೇಶದಲ್ಲಿದೆ ಎಂದು ಸಿಬಿಎಸ್‌ಇ ಪಠ್ಯಪುಸ್ತಕದಲ್ಲಿ ತಪ್ಪು ಮಾಹಿತಿ ನೀಡಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ವಿರೋಧ ವ್ಯಕ್ತಪಡಿಸಿದರು.

“ಸಿಬಿಎಸ್‌ಇ ನಾಲ್ಕನೇ ತರಗತಿ ಪಠ್ಯಪುಸ್ತಕದಲ್ಲಿ ದೇಶದ ಪ್ರಮುಖ ವಿವಿಧೋದ್ದೇಶ ನದಿ ಯೋಜನೆಗಳ ಪಟ್ಟಿಯನ್ನು ನೀಡಲಾಗಿದೆ. ಅದರಲ್ಲಿ ತುಂಗಭದ್ರಾ ನೀರಾವರಿ ಯೋಜನೆಯು ಆಂಧ್ರ ಪ್ರದೇಶದಲ್ಲಿದೆ ಎಂದು ತಪ್ಪು ಮಾಹಿತಿ ನೀಡಲಾಗಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿರುವ, ಬರೋಬ್ಬರಿ 135 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಅಣೆಕಟ್ಟು ಅಥವಾ ಪಂಪ ಸಾಗರವನ್ನು ಆಂಧ್ರ ಪ್ರದೇಶದಲ್ಲಿರುವ ಯೋಜನೆ ಎಂದು ಮಕ್ಕಳಿಗೆ ಕಲಿಸುವುದು ಎಷ್ಟು ಸರಿ?” ಎಂದು ಮೋಹನ್‌ ದಾಸರಿ ಪ್ರಶ್ನಿಸಿದರು.

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿರುವ ಮೋಹನ್‌ ದಾಸರಿ, “ನನ್ನ ಮಗನ ಪಠ್ಯಪುಸ್ತಕದ ನೀರಿನ ಸಂಪನ್ಮೂಲಗಳು ಪಾಠದಲ್ಲಿ ತುಂಗಭದ್ರ ಯೋಜನೆಯು ಆಂಧ್ರ ಪ್ರದೇಶದಲ್ಲಿದೆ ಎಂದು ಹೇಳಲಾಗಿದೆ.

ಇಂದೆಂತಹಾ ನಾಚಿಕೆಯ ವಿಷಯ ಸಿಎಂ ಬಸವರಾಜ ಬೊಮ್ಮಾಯಿಯವರೇ? ನಿಮ್ಮ ಶಿಗ್ಗಾವಿ ಕ್ಷೇತ್ರದಲ್ಲೂ ಹರಿಯುವ ತುಂಗಭದ್ರಾ ನದಿಗೆ ಸಂಬಂಧಿಸಿದ ಯೋಜನೆ ಬಗ್ಗೆಯೇ ತಪ್ಪು ಮಾಹಿತಿ ನೀಡಲಾಗಿದೆ” ಎಂದು ಮುಖ್ಯಮಂತ್ರಿಯವರನ್ನು ಕುಟುಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು