ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ, ಕೈಗಾರಿಕಾಭಿವೃದ್ಧಿ ಆಯುಕ್ತ ಗುಂಜನ್ ಕೃಷ್ಣ ಮೂರು ದಿನಗಳ ಜಪಾನ್ ಪ್ರವಾಸದಲ್ಲಿದ್ದಾರೆ.
ಈ ಸಂದರ್ಭ ಟೋಕಿಯೋದಲ್ಲಿ ಸೋಮವಾರ ಮಿಟ್ಸುಯಿ ಕಂಪನಿ ಅಧಿಕಾರಿಗಳನ್ನು ಭೇಟಿಯಾದ ಅವರು, ನ. 2 ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಔಪಚಾರಿಕ ಆಹ್ವಾನ ನೀಡಿದರು.
ಜೊತೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಹೂಡಿಕೆ ಮಾಡುವಂತೆ ಸಚಿವರು ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಿಟ್ಸುಯಿ ಕಂಪನಿಯ ಉಪ ವ್ಯವಸ್ಥಾಪಕ ನಿರ್ದೇಶಕ ಯೂ, ವ್ಯವಸ್ಥಾಪಕ ನಿರ್ದೇಶಕ ಸೈಯದ್ ಫೈಸಲ್ ಅಶ್ರಫ್ ಉಪಸ್ಥಿತರಿದ್ದರು.