News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು: ಮತದಾನ ಜಾಗೃತಿಯ ಸೈಕ್ಲೋಥಾನ್ ಗೆ ಚಾಲನೆ

Bengaluru: Poll awareness cyclothon launched
Photo Credit : G Mohan

ಬೆಂಗಳೂರು: ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ಭಾರತ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಇಂದು ಹಮ್ಮಿಕೊಂಡಿರುವ ಮತದಾನ ಜಾಗೃತಿಯ ಸೈಕ್ಲೋಥಾನ್ ಗೆ ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ *ರಜನೀಶ್ ಗೋಯಲ್, ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ *ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.

ಪ್ರತಿಜ್ಞಾವಿಧಿ ಬೋಧನೆ:
ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ರವರು, ನಾನು ಕರ್ನಾಟಕದಲ್ಲಿದ್ದೇನೆ ಕರ್ನಾಟಕ ನನ್ನಲ್ಲಿದೆ, ನಾನು ಶಕ್ತಿಯಿದ್ದೇನೆ, ಶಕ್ತಿ ನನ್ನಲ್ಲಿದೆ. ನಗರದಲ್ಲಿ ಯುವಜನದ ಮೂಲಕ ಶೇ. 100 ರಷ್ಟು ಮತದಾನ ಮಾಡುವ ಸಲುವಾಗಿ ಇಂದು ಸೈಕ್ಲೋಥಾನ್ ಅನ್ನು ನಡೆಸಲಾಗುತ್ತಿದೆ. ಎಲ್ಲರೂ ಮತದಾನ ಮಾಡಬೇಕೆಂದು ಕೋರಿದರು. ಇದೇ ವೇಳೆ ನೆರೆದಂತಹ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು.

ಸೈಕ್ಲಥಾನ್ ಸಾಗಿದ ಹಾದಿ:
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗದಿಂದ, ಕೆ.ಆರ್ ವೃತ್ತದ ನೃಪತುಂಗ ರಸ್ತೆಯ ಮೂಲಕ ಸಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಛೇರಿಯ ಮುಂಭಾಗದಿಂದ ಟೌನ್ ಹಾಲ್ ವರೆಗೆ ಸೈಕ್ಲೋಥಾನ್ ಮುಕ್ತಾಯಗೊಂಡಿತು.

ಈ ವೇಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಪ್ರತಾಪ್ ರೆಡ್ಡಿ, ಸ್ವೀಪ್ ಸಮಿತಿ ಅಧ್ಯಕ್ಷರಾದ ಶ್ರೀ ಸಂಗಪ್ಪ, ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಸ್ವೀಪ್ ನೋಡಲ್ ಅಧಿಕಾರಿಯಾದ ಸಿದ್ದೇಶ್ವರ್, ವಲಯ ಜಂಟಿ ಆಯುಕ್ತರಾದ ಪಲ್ಲವಿ, ಬೆಂಗಳೂರು ಯುತ್ ಐಕಾನ್ ಆಗಿರುವ ಮೋಹನ್ ಕುಮಾರ್, ಪಾಲಿಕೆ ಅಧಿಕಾರಿಗಳು, ಸೈಕ್ಲಿಸ್ಟ್ ಗಳಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳು, ನಾಗರಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು