ಬೆಂಗಳೂರು: ಮತದಾನ ಜಾಗೃತಿಯ ಸೈಕ್ಲೋಥಾನ್ ಗೆ ಚಾಲನೆ

ಬೆಂಗಳೂರು: ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ಭಾರತ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಇಂದು ಹಮ್ಮಿಕೊಂಡಿರುವ ಮತದಾನ ಜಾಗೃತಿಯ ಸೈಕ್ಲೋಥಾನ್ ಗೆ ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ *ರಜನೀಶ್ ಗೋಯಲ್, ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ *ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.

ಪ್ರತಿಜ್ಞಾವಿಧಿ ಬೋಧನೆ:
ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ರವರು, ನಾನು ಕರ್ನಾಟಕದಲ್ಲಿದ್ದೇನೆ ಕರ್ನಾಟಕ ನನ್ನಲ್ಲಿದೆ, ನಾನು ಶಕ್ತಿಯಿದ್ದೇನೆ, ಶಕ್ತಿ ನನ್ನಲ್ಲಿದೆ. ನಗರದಲ್ಲಿ ಯುವಜನದ ಮೂಲಕ ಶೇ. 100 ರಷ್ಟು ಮತದಾನ ಮಾಡುವ ಸಲುವಾಗಿ ಇಂದು ಸೈಕ್ಲೋಥಾನ್ ಅನ್ನು ನಡೆಸಲಾಗುತ್ತಿದೆ. ಎಲ್ಲರೂ ಮತದಾನ ಮಾಡಬೇಕೆಂದು ಕೋರಿದರು. ಇದೇ ವೇಳೆ ನೆರೆದಂತಹ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು.

ಸೈಕ್ಲಥಾನ್ ಸಾಗಿದ ಹಾದಿ:
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗದಿಂದ, ಕೆ.ಆರ್ ವೃತ್ತದ ನೃಪತುಂಗ ರಸ್ತೆಯ ಮೂಲಕ ಸಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಛೇರಿಯ ಮುಂಭಾಗದಿಂದ ಟೌನ್ ಹಾಲ್ ವರೆಗೆ ಸೈಕ್ಲೋಥಾನ್ ಮುಕ್ತಾಯಗೊಂಡಿತು.

ಈ ವೇಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಪ್ರತಾಪ್ ರೆಡ್ಡಿ, ಸ್ವೀಪ್ ಸಮಿತಿ ಅಧ್ಯಕ್ಷರಾದ ಶ್ರೀ ಸಂಗಪ್ಪ, ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಸ್ವೀಪ್ ನೋಡಲ್ ಅಧಿಕಾರಿಯಾದ ಸಿದ್ದೇಶ್ವರ್, ವಲಯ ಜಂಟಿ ಆಯುಕ್ತರಾದ ಪಲ್ಲವಿ, ಬೆಂಗಳೂರು ಯುತ್ ಐಕಾನ್ ಆಗಿರುವ ಮೋಹನ್ ಕುಮಾರ್, ಪಾಲಿಕೆ ಅಧಿಕಾರಿಗಳು, ಸೈಕ್ಲಿಸ್ಟ್ ಗಳಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳು, ನಾಗರಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sneha Gowda

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

19 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

37 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

58 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

2 hours ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago