News Karnataka Kannada
Friday, May 03 2024
ಬೆಂಗಳೂರು ನಗರ

ಬೆಂಗಳೂರು: ನಾಗರಿಕ ಸೇವಾ ಪರೀಕ್ಷೆಯಲ್ಲಿ ಮಹಿಳೆಯರ ಸಾಧನೆ- ರಾಷ್ಟ್ರಪತಿ ಶ್ಲಾಘನೆ

President Draupadi Murmu gives assent to Women's Reservation Bill
Photo Credit : Twitter

ಬೆಂಗಳೂರು: ನಾಗರಿಕ ಸೇವೆ ಪರೀಕ್ಷೆಯಲ್ಲಿ ಮೊದಲ 4 ರ‍್ಯಾಂಕ್‌ ಮಹಿಳೆಯರು ಪಡೆದುಕೊಂಡಿದ್ದು ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಮಹಿಳೆಯರು ಭವಿಷ್ಯದಲ್ಲಿ ಇಂತಹ ಸಾಕಷ್ಟು ಸಾಧನೆಗಳನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿವಿ ಪದವಿ ಪ್ರದಾನ ಸಮಾರಂಭದಲ್ಲಿ ಭಾಷಣದ ಆರಂಭದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಶುಭಾಶಯ ಕೋರಿದರು. ಈ ವರ್ಷದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಹೆಣ್ಣುಮಕ್ಕಳು ಮೊದಲ ನಾಲ್ಕು ರ್ಯಾಂಕ್‌ಗಳಲ್ಲಿ ಸ್ಥಾನ ಗಳಿಸಿರುವುದು ನನಗೆ ಸಂತಸ ತಂದಿದೆ. ಸಮಾನ ಅವಕಾಶಗಳನ್ನು ನೀಡಿದಾಗಲೆಲ್ಲಾ ನಮ್ಮ ಹೆಣ್ಣುಮಕ್ಕಳು ನಮ್ಮ ಹುಡುಗರಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಎಂಬುದನ್ನು ಇದು ಸೂಚಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದವಿ ಮತ್ತು ಗೋಲ್ಡ್ ಮೇಡಲ್ ಪ್ರದಾನ ಮಾಡಿದರು. ನಂತರ ಆರು ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಸಂಗೀತ ಮತ್ತು ಕಲೆ ವಿಭಾಗದಲ್ಲಿ ಸಾಧನೆ ಮಾಡಿದ ಡಾ ಆರ್ ಕೆ ಪದ್ಮನಾಭ, ಕ್ರೀಡೆ ಮತ್ತು ದಾರ್ಢ್ಯತೆ ವಿಭಾಗದಲ್ಲಿ ಸಾಧನೆ ಮಾಡಿದ ಪುಲ್ಲೆಲ ಗೋಪಿಚಂದ್, ಆರೋಗ್ಯ ವಿಭಾಗದಲ್ಲಿ ಸಾಧನೆ ಮಾಡಿದ ಡಾ. ಪ್ರತಿಮಾ ಮೂರ್ತಿ, ಶಿಕ್ಷಣ ವಿಭಾಗದಲ್ಲಿ ಸಾಧನೆ ಮಾಡಿದ ಪ್ರೊ. ವಿಜಯ್ ಶಂಕರ್ ಶುಕ್ಲಾ, ಸಮಾಜ ಸೇವೆ ವಿಭಾಗದಲ್ಲಿ ಸಾಧನೆ ಮಾಡಿದ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು