ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಬೆಂಗಳೂರು ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯಾದ ‘ಸಮೃದ್ಧಿಯ ಪ್ರತಿಮೆ’ಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅನಾವರಣಗೊಳಿಸಿದರು.
ನಗರದ ಅಭಿವೃದ್ಧಿಗೆ ಕೆಂಪೇಗೌಡರ ಕೊಡುಗೆಯನ್ನು ಸ್ಮರಿಸಲು ಇದನ್ನು ನಿರ್ಮಿಸಲಾಗಿದೆ.
ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ, ಪ್ರಧಾನಮಂತ್ರಿಯವರು ಕೆಂಪೇಗೌಡರ ಪ್ರತಿಮೆಯ ಪಾದಗಳಿಗೆ ಪವಿತ್ರ ನೀರನ್ನು ಸುರಿದರು. ವಿಶ್ವದ ಬೇರೆ ಯಾವುದೇ ವಿಮಾನ ನಿಲ್ದಾಣವು ತನ್ನ ಸ್ಥಾಪಕರ ಇಷ್ಟು ಎತ್ತರದ ಪ್ರತಿಮೆಯನ್ನು ಹೊಂದಿಲ್ಲ ಮತ್ತು ಇದು ವಿಶ್ವ ದಾಖಲೆ ಪುಸ್ತಕದಲ್ಲಿ ದಾಖಲೆಯಾಗಿ ಹೋಗುತ್ತದೆ ಎಂದು ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದರು.
ಕೆಂಪೇಗೌಡರ ಪುತ್ಥಳಿ ಮತ್ತು 23 ಎಕರೆ ಥೀಮ್ ಪಾರ್ಕ್ ಒಳಗೊಂಡ ಈ ಯೋಜನೆಯನ್ನು ಸುಮಾರು 84 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ.