ಬೆಂಗಳೂರು: ಕರ್ನಾಟದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಮೂರು ಪಕ್ಷಗಳು ಬಿರುಸಿನ ಪ್ರಚಾರ, ಮಾತಿನ ಸಮರದಲ್ಲಿ ತೊಡಗಿಸಿಕೊಂಡಿವೆ. ಈ ನಿಟ್ಟಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಭಾನುವಾರ ಹಾಗೂ ಸೋಮವಾರ ಪ್ರಿಯಾಂಕಾ ಗಾಂಧಿ ಅವರ ಸಹೋದರ ರಾಹುಲ್ಗಾಂಧಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಿದ್ದರು. ಸೋಮವಾರ ರಾತ್ರಿ ರಾಹುಲ್ಗಾಂಧಿ ಅವರು ದೆಹಲಿಗೆ ವಾಪಸಾದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಅವರು ಕರ್ನಾಟಕಕ್ಕೆ ಬರಲಿದ್ದಾರೆ.
ಮಂಗಳವಾರ ಮಧ್ಯಾಹ್ನ ಮೈಸೂರಿನ ಟಿ.ನರಸೀಪುರ ಕ್ಷೇತ್ರದ ಯಳವರ ಹುಂಡಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಗೌರಿಶಂಕರ ಹಾಲ್ನಲ್ಲಿ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಮೈಸೂರು ಜಿಲ್ಲೆಯ ಕೃಷ್ಣರಾಜನಗರ ಕ್ಷೇತ್ರದಲ್ಲಿ ಬೃಹತ್ ರಾರಯಲಿ ನಡೆಸಲಿದ್ದಾರೆ. ತೋಪಮ್ಮ ದೇವಾಲಯದಿಂದ ಅಂಬೇಡ್ಕರ್ ಪ್ರತಿಮೆ ಮೂಲಕ ಪುರಸಭೆ ಕಚೇರಿವರೆಗೆ ಬೃಹತ್ ರಾರಯಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ.