ಬೆಂಗಳೂರು: ಪುಣೆ ಹೆದ್ದಾರಿ ಮಲ್ಲೇಶ್ವರಂ ಬಳಿ ಕೆಎಸ್ ಅಂಡ್ ಡಿಎಲ್ ಸಂಕೀರ್ಣದಲ್ಲಿಂದು ರಾಜರ್ಷಿ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಶ್ರೀಗಂಧವನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ನಿಯಮಿತದಿಂದ ಹಮ್ಮಿಕೊಂಡಿದ್ದ ಈ ಹೃದಯಸ್ಪರ್ಶಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ನಿಗಮದ ಅಧ್ಯಕ್ಷ ಮಾಡಾಳು ವಿರೂಪಾಕ್ಷಪ್ಪ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ. ಬೃಹತ್ ಕೈಗಾರಿಕಾ ಸಚಿವ ಡಾ. ಮುರುಗೇಶ್ ನಿರಾಣಿ, ಮಂಡಳಿಯ ನಿರ್ದೇಶಕರಾದ ಮಲ್ಲಿಕಾರ್ಜುನ ಸಾವಕಾರ, ಕೆ.ನಿವೇದಿತಾ ರಾಜು, ಶಿವಕುಮಾರ್ ಹುಡೇದ್, ವ್ಯವಸ್ಥಾಪಕ ನಿರ್ದೇಶಕ ವಿಕಾಶ್ ಕುಮಾರ್ ವಿಕಾಶ್,ಕೆ.ನಿತೀಶ್, ಸಿದ್ದಿಕ್ ಪಾಷಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.